Sunday, June 20, 2021

ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ನಮ್ಮೆಲ್ಲರೂ ದಾರಿದೀಪ : ಬಸವರಾಜ ಬಿ ಆನೇಕೊಪ್ಪ

ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ೬೮ನೇ ಜನ್ಮದಿನದ ಅಂಗವಾಗಿ ಕಾಗದನಗರ ವಾರ್ಡ್ ನಂ.೧ರ ಪಾರ್ಕ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮರೆತೇವೆಂದರು ಮರೆಯಲಿ ನಿನ್ನ ಹೆಂಗ..! ವಿಶೇಷ ಕಾರ್ಯಕ್ರಮ ಜೆಡಿಎಸ್  ಮುಖಂಡರಾದ ಶಾರದ ಅಪ್ಪಾಜಿ ಉದ್ಘಾಟಿಸಿದರು.
    ಭದ್ರಾವತಿ, ಜೂ. ೨೦: ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ತಮ್ಮ ಅಧಿಕಾರದ ಅವಧಿಯಲ್ಲಿ ಯಾವುದೇ ತಾರತಮ್ಯವಿಲ್ಲದೆ ಭದ್ರಾವತಿ ಕ್ಷೇತ್ರ ಸರ್ವತೋಮುಖ ಅಭಿವೃದ್ಧಿಗೆ ಪಾತ್ರರಾಗಿದ್ದರು. ಅವರಲ್ಲಿ ಸಾಮಾಜಿಕ ಬದ್ಧತೆ, ಜನಪರ ಕಾಳಜಿ ನಮ್ಮೆಲ್ಲರೂ ದಾರಿದೀಪವಾಗಿದೆ ಎಂದು ವಾರ್ಡ್ ನಂ.೧೯ರ ನಗರಸಭಾ ಸದಸ್ಯ ಬಸವರಾಜ ಬಿ.  ಆನೇಕೊಪ್ಪ ಹೇಳಿದರು.
    ಅವರು ಭಾನುವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ೬೮ನೇ ಜನ್ಮದಿನದ ಅಂಗವಾಗಿ ಕಾಗದನಗರ ವಾರ್ಡ್ ನಂ.೧ರ ಪಾರ್ಕ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮರೆತೇವೆಂದರು ಮರೆಯಲಿ ನಿನ್ನ ಹೆಂಗ..! ವಿಶೇಷ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು.
ಅಪ್ಪಾಜಿಯವರು ಯಾವುದೇ ಜಾತಿ, ಧರ್ಮ, ಜನಾಂಗಕ್ಕೆ ಮೀಸಲಾಗಿರದೆ ಎಲ್ಲರ ಅಭಿವೃದ್ಧಿಗೆ ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ಅವರು ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದುಕೊಂಡಿದ್ದಾರೆಂದರು.
    ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸಿದರು. ವಾರ್ಡ್ ೧೯ರ ವ್ಯಾಪ್ತಿಯಲ್ಲಿನ ಆಶಾ ಕಾರ್ಯಕರ್ತರು, ಪೌರಕಾರ್ಮಿಕರು ಹಾಗು ಬಡವರ್ಗದವರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಸಸಿ ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.
    ನಗರಸಭಾ ಸದಸ್ಯೆ ಜಯಶೀಲ, ಕಾಗದನಗರ ಆಂಗ್ಲ ಶಾಲೆ ಪ್ರಾಂಶುಪಾಲ ಸತೀಶ್, ಮುಖಂಡರಾದ ಡಿ.ಟಿ ಶ್ರೀಧರ್, ಲೋಕೇಶ್ವರ್‌ರಾವ್, ತಿಮ್ಮಪ್ಪ, ಎಸ್. ಚಂದ್ರಶೇಖರ್, ಕೇಬಲ್ ಸುರೇಶ್, ರಮೇಶ್, ಡಾ. ಮಂಜುನಾಥ್,  ಕಮಲಕರ್, ವಿಲಿಯಂ, ಗಿರ್ಗೇಶ್, ವೆಂಕಟೇಶ್ ಉಜ್ಜನಿಪುರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಮಟೆ ಜಗದೀಶ್ ತಂಡದಿಂದ ಜಾನಪದ ಗಾಯನ ನಡೆಯಿತು.

No comments:

Post a Comment