Thursday, June 3, 2021

ಕೊರೋನಾ ಎಂಬ ಹೆಸರಿನಿಂದ ಉಂಟಾಗಿರುವ ಭಯ ನಮ್ಮಲ್ಲಿನ ರೋಗ ನಿರೋಧಕ ಶಕ್ತಿಯನ್ನು ಕುಂದಿಸುತ್ತಿದೆ : ಗುರುರಾಜ್


ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ತಾಲೂಕು ಕುಂಚ ಕಲಾವಿದರ ಸಂಘದ ಕಛೇರಿಯಲ್ಲಿ ದಿನಸಿ ಸಾಮ್ರಗಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
   ಭದ್ರಾವತಿ, ಜೂ. ೩: ಕೊರೋನಾ ಸೋಂಕು ಎದುರಿಸುವ ಶಕ್ತಿ ಪ್ರತಿಯೊಬ್ಬರಿಗೂ ಇದೆ. ಆದರೆ ಕೊರೋನಾ ಎಂಬ ಹೆಸರಿನಿಂದ ಉಂಟಾಗಿರುವ ಭಯ ನಮ್ಮಲ್ಲಿನ ರೋಗ ನಿರೋಧಕ ಶಕ್ತಿಯನ್ನು ಕುಂದಿಸುತ್ತಿದೆ ಎಂದು ಕರ್ನಾಟಕ ರಾಜ್ಯ ನಾಮಫಲಕ ಕಲಾವಿದರ ಸಂಘದ ಅಧ್ಯಕ್ಷ ಗುರುರಾಜ್ ಹೇಳಿದರು.
     ಅವರು ಗುರುವಾರ ನಗರದ ತರೀಕೆರೆ ರಸ್ತೆಯಲ್ಲಿರುವ ತಾಲೂಕು ಕುಂಚ ಕಲಾವಿದರ ಸಂಘದ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ದಿನಸಿ ಸಾಮ್ರಗಿ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮನುಷ್ಯರಲ್ಲಿ ಕೊರೋನಾ ಸೋಂಕಿನ ವಿರುದ್ಧ ಹೋರಾಡುವ ಶಕ್ತಿ ಹೆಚ್ಚಿನ ಪ್ರಮಾಣದಲ್ಲಿದೆ. ಆದರೂ ಸಹ ಸೋಂಕು ಕುರಿತು ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ಕಲಾವಿದರು ಸೋಂಕಿನ ಕುರಿತು ಎಚ್ಚರ ವಹಿಸಬೇಕು. ವಿನಾಕಾರಣ ಯಾರು ಸಹ ಭಯಪಡುವ ಅಗತ್ಯವಿಲ್ಲ. ಪ್ರಸ್ತುತ ಎದುರಾಗಿರುವ ಸಂಕಷ್ಟದ ಸಮಯದಲ್ಲಿ  ಸಾಧ್ಯವಾದಷ್ಟು ಮಟ್ಟಿಗೆ ಕಲಾವಿದರ ನೆರವಿಗೆ ಮುಂದಾಗುವುದಾಗಿ ಭರವಸೆ ನೀಡಿದರು.
   ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್‌ಬಾಬು, ತಾಲೂಕು ಪದಾಧಿಕಾರಿ ಸುಬ್ರಮಣಿ, ಕುಂಚ ಕಾವಿದರ ಸಂಘದ ಅಧ್ಯಕ್ಷ ಮಹಮದ್ ಸಮೀವುಲ್ಲಾ, ಖಾಜಾಂಚಿ ಹಫೀಜ್ ಉರ್ ರಹಮಾನ್, ಸಹಕಾರ್ಯದರ್ಶಿ ಬಿ. ಗುರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ರಾಜ್ಯ ಸಂಘದ ವತಿಯಿಂದ ಸಂಕಷ್ಟದಲ್ಲಿರುವ ಕಲಾವಿದರಿಗೆ ದಿನಸಿ ಸಾಮಗ್ರಿ ವಿತರಿಸಲಾಯಿತು.

No comments:

Post a Comment