ಭದ್ರಾವತಿ, ಜೂ. ೫: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದ್ದು, ಶನಿವಾರ ೧೫೫ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ಒಂದೇ ದಿನ ೬ ಮಂದಿ ಬಲಿಯಾಗಿದ್ದಾರೆ.
ಒಟ್ಟು ೫೬೫ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೧೫೫ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕೇವಲ ೯೧ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಇದುವರೆಗೂ ಒಟ್ಟು ೫೭೭೯ ಮಂದಿಗೆ ಸೋಂಕು ತಗುಲಿದ್ದು, ಈ ಪೈಕಿ ೪೭೧೮ ಮಂದಿ ಗುಣಮುಖರಾಗಿದ್ದಾರೆ. ೧೦೬೧ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿವೆ. ಇದುವರೆಗೂ ಸೋಂಕಿನಿಂದ ೧೪೯ ಮಂದಿ ಮೃತಪಟ್ಟಿದ್ದು, ೫೩೫ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರ ಭಾಗದಲ್ಲಿ ಒಂದೇ ದಿನ ೩೧ ಕಂಟೈನ್ಮೆಂಟ್ ಜೋನ್ಗಳನ್ನು ನಿರ್ಮಿಸಲಾಗಿದ್ದು, ಇದುವರೆಗೂ ಒಟ್ಟು ೭೯ ಜೋನ್ಗಳಿವೆ. ಗ್ರಾಮೀಣ ಭಾಗದಲ್ಲಿ ೨೫ ಕಂಟೈನ್ಮೆಂಟ್ ಜೋನ್ಗಳಿದ್ದು, ೧೭ ಜೋನ್ಗಳನ್ನು ತೆರವುಗೊಳಿಸಲಾಗಿದೆ.
No comments:
Post a Comment