ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ
ರಾಜ್ಯದಲ್ಲೇ ಕೋವಿಡ್ ಲಸಿಕೆ ಉತ್ಪಾದನೆಗೆ ಅನುಮತಿ ನೀಡುವ ಜೊತೆಗೆ ೧೮ ವರ್ಷ ಮೇಲ್ಪಟ್ಟ ಎಲ್ಲಾ ಜನರಿಗೂ ಉಚಿತವಾಗಿ ಲಸಿಕೆ ಹಾಕುವಂತೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜೂ. ೪: ರಾಜ್ಯದಲ್ಲೇ ಕೋವಿಡ್ ಲಸಿಕೆ ಉತ್ಪಾದನೆಗೆ ಅನುಮತಿ ನೀಡುವ ಜೊತೆಗೆ ೧೮ ವರ್ಷ ಮೇಲ್ಪಟ್ಟ ಎಲ್ಲಾ ಜನರಿಗೂ ಉಚಿತವಾಗಿ ಲಸಿಕೆ ಹಾಕುವಂತೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಸೇರಿದಂತೆ ದೇಶಾದ್ಯಂತ ಲಸಿಕೆ ಕೊರತೆ ಕಂಡು ಬರುತ್ತಿದ್ದು, ಇದರಿಂದಾಗಿ ಕೊರೋನಾ ಸೋಂಕಿಗೆ ಒಳಗಾದವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಸಮರ್ಪಕವಾಗಿ ಆಮ್ಲಜನಕ ಪೂರೈಕೆಯಾಗದಿರುವುದು, ವೆಂಟಿಲೇಟರ್ ವ್ಯವಸ್ಥೆ ಇಲ್ಲದಿರುವುದು ಸಹ ಸಾವಿಗೆ ಕಾರಣವಾಗುತ್ತಿದೆ. ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ.
ರಾಜ್ಯದಲ್ಲಿಯೇ ಲಸಿಕೆ ಉತ್ಪಾದನೆಗೆ ಅನುಮತಿ ನೀಡುವುದರಿಂದ ಹೆಚ್ಚಿನ ಲಸಿಕೆ ಉತ್ಪಾದಿಸಲು ಸಾಧ್ಯವಾಗುತ್ತದೆ. ಜೊತೆಗೆ ಎಲ್ಲರಿಗೂ ಉಚಿತವಾಗಿ ಲಸಿಕೆ ಪೂರೈಸ ಬಹುದಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವ ಜೊತೆಗೆ ಕೋವಿಡ್-೧೯ ನಿಯಂತ್ರಣಕ್ಕೆ ಮುಂದಾಗುವಂತೆ ಮನವಿ ಮಾಡಲಾಗಿದೆ.
ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಎಂ. ಶಿವಕುಮಾರ್, ಪ್ರಕಾಶ್, ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment