ಭದ್ರಾವತಿ, ಜೂ. ೩೦: ತಾಲೂಕಿನ ಶ್ರೀ ವಿನಾಯಕ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ಶಾಲಾ ಮಕ್ಕಳಿಗೆ ಜು.೨ರಂದು ಮಧ್ಯಾಹ್ನ ೩.೩೦ಕ್ಕೆ ಉಚಿತ ನೋಟ್ ವಿತರಣೆ ನಡೆಯಲಿದೆ.
ಅರಳಿಹಳ್ಳಿ ಸರ್ಕಾರಿ ಶಾಲೆಯಲ್ಲಿ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಟ್ರಸ್ಟ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ನೆರವಾಗುವ ನಿಟ್ಟಿನಲ್ಲಿ ಸೇವಾ ಕಾರ್ಯಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಶಾಲಾ ಮಕ್ಕಳ ಪೋಷಕರು, ಗ್ರಾಮದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಟ್ರಸ್ಟ್ ಅಧ್ಯಕ್ಷ, ಸಮಾಜ ಸೇವಕ ಎ. ಧರ್ಮೇಂದ್ರ ಕೋರಿದ್ದಾರೆ.
No comments:
Post a Comment