ಭದ್ರಾವತಿ ಜನ್ನಾಪುರ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಶನಿವಾರ ಶ್ರೀ ಸತ್ಯಸಂದ ತೀರ್ಥ ಶ್ರೀ ಪಾದಂಗಳವರ ಆರಾಧನೆ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಜೂ. ೧೨: ನಗರದ ಜನ್ನಾಪುರ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಶನಿವಾರ ಶ್ರೀ ಸತ್ಯಸಂದ ತೀರ್ಥ ಶ್ರೀ ಪಾದಂಗಳವರ ಆರಾಧನೆ ಹಮ್ಮಿಕೊಳ್ಳಲಾಗಿತ್ತು.
ಆರಾಧನೆ ಹಿನ್ನಲೆಯಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ, ಭಕ್ತರಿಂದ ಪಾರಾಯಣ, ಪಂಡಿತರಾದ ಗಂಟೆ ನಾರಾಯಣಚಾರ್ ಅವರಿಂದ ಉಪನ್ಯಾಸ, ಪಲ್ಲಕ್ಕಿ ಉತ್ಸವ, ಅಲಂಕಾರ ಸೇವೆ ಹಾಗು ಅಷ್ಟಾವಧಾನ ಮತ್ತು ಹಸ್ತೋದಕ ಹಾಗು ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.
ಆನಂದತೀರ್ಥ ಕಲ್ಲಾಪುರ್, ರಾಮಚಂದ್ರ, ಶ್ರೀನಿವಾಸಚಾರ್, ರಘು ರಾಮಾಚಾರ್, ಪ್ರಧಾನ ಅರ್ಚಕ ಮುರುಳಿಧರ್, ರಮಾಕಾಂತ್, ಎಸ್.ಎನ್ ಬಾಲಕೃಷ್ಣ, ಹಳ್ಳಿಕಟ್ಟೆ ನಾಗರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಭಾರತಿ ಭಜನಾ ಮಂಡಳಿ ಸದಸ್ಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.
No comments:
Post a Comment