Tuesday, June 22, 2021

ಗೋಣಿಬೀಡು, ಮಲ್ಲಿಗೇನಹಳ್ಳಿ ವ್ಯಾಪ್ತಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ಭದ್ರಾವತಿ ತಾಲೂಕಿನ ಗೋಣಿಬೀಡು, ಮಲ್ಲಿಗೇನಹಳ್ಳಿ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ.
ಭದ್ರಾವತಿ, ಜೂ. ೨೨: ತಾಲೂಕಿನ ಗೋಣಿಬೀಡು, ಮಲ್ಲಿಗೇನಹಳ್ಳಿ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚು ಮಾಡಿದೆ.
    ಬೆಳಿಗ್ಗೆ ೧೦ ಗಂಟೆ ಸಮಯದಲ್ಲಿ  ಒಂಟಿ ಸಲಗ ಕಾಣಿಸಿಕೊಂಡಿದೆ. ತಕ್ಷಣ ಅಕ್ಕಪಕ್ಕದ ಗ್ರಾಮಸ್ಥರು ಪಟಾಕಿ ಸಿಡಿಸಿ ಕಾಡಿಗೆ ಓಡಿಸಿದ್ದಾರೆ. ಒಂಟಿ ಸಲಗ ಕಾಣಿಸಿಕೊಂಡಿರುವ ರಸ್ತೆಯಲ್ಲಿಯೇ ಬೆಳಗಿನ ಸಮಯದಲ್ಲಿ ಜನರು ವಾಯುವಿಹಾರಕ್ಕೆ ತೆರಳುತ್ತಾರೆ. ಇದರಿಂದಾಗಿ ಆತಂಕ ಹೆಚ್ಚು ಮಾಡಿದೆ.
   ಒಂಟಿ ಸಲಗ ಕಾಣಿಸಿಕೊಂಡಿರುವ ದೃಶ್ಯ ಸಾಮಾಜಿಕ ಸುದ್ದಿ ಜಾಲಗಳಲ್ಲಿ ಹರಿಡಾಡುತ್ತಿದೆ. ಒಂಟಿ ಸಲಗ ಕಾಣಿಸಿಕೊಂಡಿರುವುದು ನಿಜ ಎಂದು ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ಭದ್ರಾ ಅಭಯಾರಣ್ಯದಿಂದ ಆನೆಗಳು ಬಂದು ಹೋಗುವುದು ಸಹಜ ಎಂದು ತಿಳಿಸಿದ್ದಾರೆ.

No comments:

Post a Comment