Sunday, June 6, 2021

ಜೂ.೭ರಿಂದ ಪುನಃ ಸಂಪೂರ್ಣ ಲಾಕ್‌ಡೌನ್

   ಭದ್ರಾವತಿ, ಜೂ. ೬: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಜೂ.೭ರಿಂದ ಪುನಃ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ.
    ಬೆಳಿಗ್ಗೆ ೬ ರಿಂದ ೮ ಗಂಟೆವರೆಗೆ ಅಗತ್ಯ ವಸ್ತುಗಳಾದ ದಿನಸಿ, ಹಣ್ಣು ಮತ್ತು ತರಕಾರಿ ಖರೀದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ರೈತರಿಗೆ ಅನುಕೂಲವಾಗುವಂತೆ ಗೊಬ್ಬರ, ಕ್ರಿಮಿನಾಶಕ ಮತ್ತು ಕೃಷಿ ಬಿತ್ತನೆ ಬೀಜಗಳ ಖರೀದಿಗೆ ಬೆಳಿಗ್ಗೆ ೬ ರಿಂದ ೧೦ ಗಂಟೆವರೆಗೆ ಹಾಗು ಪೆಟ್ರೋಲ್ ಬಂಕ್‌ಗಳು ಬೆಳಿಗ್ಗೆ ೬ ರಿಂದ ಮಧ್ಯಾಹ್ನ ೧೨ ಗಂಟೆವರೆಗೆ ಮಾತ್ರ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
    ಉಳಿದಂತೆ ಮುಂದಿನ ಆದೇಶದವರೆಗೂ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಅಲ್ಲದೆ ಅನಾವಶ್ಯಕ ಜನಸಂಚಾರ ಸಹ ನಿಷೇಧಿಸಲಾಗಿದೆ. ಸಾರ್ವಜನಿಕರು ಅನಾವಶ್ಯಕವಾಗಿ ಮನೆಯಿಂದ ಹೊರಬರದೆ ಸಹಕರಿಸುವಂತೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಕೋರಿದ್ದಾರೆ.

No comments:

Post a Comment