Friday, June 18, 2021

ಶಿಕ್ಷಕರು, ಬಡ ವರ್ಗದವರಿಗೆ ದಿನಸಿ ಸಾಮಗ್ರಿ ವಿತರಣೆ


ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಭದ್ರಾವತಿಯಲ್ಲಿ ತರುಣ ಭಾರತಿ ವಿಶ್ವಸ್ಥ ಮಂಡಳಿ ಮತ್ತು ವಿಶ್ವ ಭೂಷಣ ವಿಶ್ವಸ್ಥ ಮಂಡಳಿ ವತಿಯಿಂದ ಶುಕ್ರವಾರ ಹಿಂದೂ ಸಾಮ್ರಾಜ್ಯೋತ್ಸವ ದಿನಾಚರಣೆ ಮತ್ತು ಶಾಲಾ ಶಿಕ್ಷಕರು ಹಾಗು ಬಡ ವರ್ಗದವರಿಗೆ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮ ನಡೆಯಿತು.  
     ಭದ್ರಾವತಿ, ಜೂ. ೧೮: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ತರುಣ ಭಾರತಿ ವಿಶ್ವಸ್ಥ ಮಂಡಳಿ ಮತ್ತು ವಿಶ್ವ ಭೂಷಣ ವಿಶ್ವಸ್ಥ ಮಂಡಳಿ ವತಿಯಿಂದ ಶುಕ್ರವಾರ ಹಿಂದೂ ಸಾಮ್ರಾಜ್ಯೋತ್ಸವ ದಿನಾಚರಣೆ ಮತ್ತು ಶಾಲಾ ಶಿಕ್ಷಕರು ಹಾಗು ಬಡ ವರ್ಗದವರಿಗೆ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮ ನಡೆಯಿತು.  
   ಕೇಶವಪುರ ಬಡಾವಣೆಯ ತರುಣ ಭಾರತಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶ್ವ ಭೂಷಣ ವಿಶ್ವಸ್ಥ ಮಂಡಳಿ ಕಾರ್ಯದರ್ಶಿ ಮಧುಕರ್ ಕಾನಿಟ್ಕರ್ ಮಾತನಾಡಿ, ಹಿಂದೂ ಸಾಮ್ರಾಜ್ಯೋತ್ಸವ ಹಾಗು ಶಿವಾಜಿ ಮಹಾರಾಜರು ನಡೆಸಿದ ಹೋರಾಟಗಳನ್ನು ವಿವರಿಸಿದರು.  ಅವರ ಸಾಹಸವನ್ನು ತಿಳಿಸಿದರು.
      ತರುಣ ಭಾರತಿ ವಿದ್ಯಾ ಕೇಂದ್ರದ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವಭೂಷಣ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಹಾಗು ತರುಣ ಭಾರತಿ  ವಿದ್ಯಾ ಕೇಂದ್ರದ ಕಾರ್ಯದರ್ಶಿ ಡಾ. ಎಂ.ಎಚ್ ವಿದ್ಯಾಶಂಕರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಯೋಗದ ಮಹತ್ವ ವಿವರಿಸಿದರು. ಸಹ ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು.  
     ಸವಿತಾ ನಿರೂಪಿಸಿದರು. ಸುಜಾತ ಸ್ವಾಗತಿಸಿದರು. ಪೂರ್ಣಿಮಾ ಅಮೃತವಚನ ನಡೆಸಿಕೊಟ್ಟರು. ಸರ್ವಮಂಗಳ ವಂದಿಸಿದರು. ಸುಮಾರು ೩೫ಕ್ಕೂ ಹೆಚ್ಚು ಮಂದಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
     ಖಜಾಂಚಿ ವಿಶ್ವನಾಥ್, ಸದಸ್ಯರಾದ ರಾಮಚಂದ್ರ, ಸತ್ಯನಾರಾಯಣ, ಸಿದ್ದರಾಮಣ್ಣ, ಬೋಧಕ ಹಾಗು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

No comments:

Post a Comment