Wednesday, June 9, 2021

ಆಶಾ ಕಾರ್ಯಕರ್ತೆಯರು, ಆಂಬ್ಯುಲೆನ್ಸ್ ಚಾಲಕರಿಗೆ ದಿನಸಿ ಸಾಮಗ್ರಿ ವಿತರಣೆ

ಭದ್ರಾವತಿ ನಗರಸಭೆ ವಾರ್ಡ್ ನಂ.೨೬ರ ವ್ಯಾಪ್ತಿಯ ನ್ಯೂ ಕಾಲೋನಿ ಭಾಗದ ಆಶಾ ಕಾರ್ಯಕರ್ತೆಯರು ಹಾಗೂ ಸರ್ಕಾರಿ ಆಂಬ್ಯುಲೆನ್ಸ್ ಚಾಲಕರಿಗೆ ಬುಧವಾರ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. 

   ಭದ್ರಾವತಿ, ಜೂ. ೯: ನಗರಸಭೆ ನಗರಸಭೆ ವಾರ್ಡ್ ನಂ.೨೬ರ ವ್ಯಾಪ್ತಿಯ ನ್ಯೂ ಕಾಲೋನಿ ಭಾಗದ ಆಶಾ ಕಾರ್ಯಕರ್ತೆಯರು ಹಾಗೂ ಸರ್ಕಾರಿ ಆಂಬ್ಯುಲೆನ್ಸ್ ಚಾಲಕರಿಗೆ ಬುಧವಾರ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
    ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಜಿ ರಾಮಚಂದ್ರ ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು ೨೫ ಮಂದಿಗೆ ದಿನಸಿ ಸಾಮಗ್ರಿ ಹಾಗು ತರಕಾರಿ ವಿತರಿಸುವ ಮೂಲಕ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.
    ನಗರಸಭಾ ಸದಸ್ಯರಾದ ಸರ್ವಮಂಗಳ, ಎಸ್.ಎಸ್ ಭೈರಪ್ಪ, ಕಾಂತರಾಜ್, ಮಾಜಿ ಸದಸ್ಯರಾದ ಮುಕುಂದಪ್ಪ, ಯುವ ಮುಖಂಡ ಬಿ.ಎಸ್ ಬಸವೇಶ್, ಫ್ರಾನ್ಸಿಸ್, ಕಾಂಗ್ರೆಸ್ ಮುಖಂಡರಾದ ವಿಲ್ಸನ್ ಬಾಬು, ವಿಜಯಗಾಂಧಿ, ಎಲ್ಲೋಜಿರಾವ್, ಹರೀಶ್, ವಿನೋದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment