ಭದ್ರಾವತಿ ನಗರಸಭೆ ವಾರ್ಡ್ ನಂ.೧೯ರ ವ್ಯಾಪ್ತಿಯ ಎಂಪಿಎಂ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ತೆರೆಯಲಾಗಿರುವ ಕೋವಿಡ್-೧೯ ಲಸಿಕಾ ಕೇಂದ್ರವನ್ನು ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ಜೂ. ೨೬: ನಗರಸಭೆ ವಾರ್ಡ್ ನಂ.೧೯ರ ವ್ಯಾಪ್ತಿಯ ಎಂಪಿಎಂ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ತೆರೆಯಲಾಗಿರುವ ಕೋವಿಡ್-೧೯ ಲಸಿಕಾ ಕೇಂದ್ರವನ್ನು ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ವಾರ್ಡ್ ಸದಸ್ಯ ಬಸವರಾಜ ಬಿ. ಆನೇಕೊಪ್ಪರವರು ಎಂಪಿಎಂ ಆಸ್ಪತ್ರೆಯಲ್ಲಿ ಲಸಿಕಾ ಕೇಂದ್ರ ತೆರೆಯುವಂತೆ ಹಲವು ಬಾರಿ ಜಿಲ್ಲಾಧಿಕಾರಿಗಳಿಗೆ ಹಾಗು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದರು. ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗು ಶಾಸಕರ ಗಮನಕ್ಕೂ ತಂದಿದ್ದರು. ಈ ಹಿನ್ನಲೆಯಲ್ಲಿ ಹೆಚ್ಚುವರಿಯಾಗಿ ಲಸಿಕಾ ಕೇಂದ್ರ ತೆರೆಯಲಾಗಿದೆ.
ನಗರಸಭಾ ಸದಸ್ಯರಾದ ಬಸವರಾಜ ಬಿ ಆನೇಕೊಪ್ಪ, ಜಯಶೀಲ ಸುರೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಎಂಪಿಎಂ ನಗರಾಡಳಿತ ಇಲಾಖೆ ಅಧಿಕಾರಿ ಸತೀಶ್, ಮುಖಂಡರಾದ ತಿಮ್ಮಪ್ಪ, ವೆಂಕಟೇಶ್ ಉಜ್ಜನಿಪುರ, ಗಿರ್ಗೇಶ್, ರಮೇಶ್, ದಿನೇಶ್, ಪ್ರವೀಣ್ಕುಮಾರ್, ಗಂಗಾಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment