ಭದ್ರಾವತಿ, ಜೂ. ೨: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಪುನಃ ಏರಿಕೆ ದಾರಿ ಹಿಡಿದಿದ್ದು, ಬುಧವಾರ ೧೫೦ರ ಗಡಿ ದಾಟಿದೆ. ಇದರಿಂದಾಗಿ ತಾಲೂಕಿನ ಜನರಲ್ಲಿ ಆತಂಕ ಹೆಚ್ಚಾಗಿದೆ.
ಒಟ್ಟು ೫೪೧ ಮಂದಿ ಮಾದರಿ ಸಂಗ್ರಹಿಸಲಾಗಿದ್ದು, ೧೫೨ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಕೇವಲ ೬೯ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೂ ತಾಲೂಕಿನಲ್ಲಿ ಒಟ್ಟು ೫೧೦೫ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೪೩೨೫ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೭೮೦ ಸಕ್ರಿಯ ಪ್ರಕರಣಗಳು ಬಾಕಿ ಇದ್ದು, ಇದುವರೆಗೂ ೧೩೪ ಮಂದಿ ಮೃತಪಟ್ಟಿದ್ದಾರೆ.
ಒಟ್ಟು ೪೬೨ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ನಗರ ವ್ಯಾಪ್ತಿಯಲ್ಲಿ ೭೦ ಕಂಟೈನ್ಮೆಂಟ್ ಜೋನ್ಗಳಿವೆ. ಈ ಪೈಕಿ ೧೪ ತೆರವುಗೊಳಿಸಲಾಗಿದೆ. ಉಳಿದಂತೆ ಗ್ರಾಮಾಂತರ ಭಾಗದಲ್ಲಿ ೩೩ ಕಂಟೈನ್ಮೆಂಟ್ ಜೋನ್ಗಳಿವೆ.
ಒಂದು ತಿಂಗಳ ಮಗುವಿಗೂ ಸೋಂಕು:
ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ತಿಂಗಳ ಮಗುವಿಗೂ ಕೊರೋನಾ ಸೋಂಕು ತಗುಲಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಗ್ರಾಮ ಪಂಚಾಯಿತಿ ಸದಸ್ಯ ಕೆ.ವಿ ಧನಂಜಯ, ಗ್ರಾಮಸ್ಥರು ಚಿಕ್ಕ ಮಕ್ಕಳನ್ನು ಹೆಚ್ಚು ಎಚ್ಚರದಿಂದ ನೋಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
No comments:
Post a Comment