Wednesday, June 2, 2021

ಬೀದಿಬದಿ ವ್ಯಾಪಾರಿಗಳಿಗೆ ಕೊರೋನಾ ಲಸಿಕೆ

ಭದ್ರಾವತಿ ನಗರಸಭೆ ೩೫ ವಾರ್ಡ್‌ಗಳ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಕೊರೋನಾ ಲಸಿಕೆ ಹಾಕಿಸುವ ನಿಟ್ಟಿನಲ್ಲಿ ನಗರಸಭೆ ಆಡಳಿತ ಮುಂದಾಗಿದ್ದು, ಲಸಿಕೆ ಹಾಕುವ ಕಾರ್ಯಕ್ಕೆ ಪೌರಾಯುಕ್ತ ಕೆ. ಪರಮೇಶ್ ಚಾಲನೆ ನೀಡಿದರು.
   ಭದ್ರಾವತಿ, ಜೂ. ೨: ನಗರಸಭೆ ೩೫ ವಾರ್ಡ್‌ಗಳ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಕೊರೋನಾ ಲಸಿಕೆ ಹಾಕಿಸುವ ನಿಟ್ಟಿನಲ್ಲಿ ನಗರಸಭೆ ಆಡಳಿತ ಮುಂದಾಗಿದ್ದು, ಲಸಿಕೆ ಹಾಕುವ ಕಾರ್ಯಕ್ಕೆ ಪೌರಾಯುಕ್ತ ಕೆ. ಪರಮೇಶ್ ಚಾಲನೆ ನೀಡಿದರು.
   ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು ೧೬೬೮ ಬೀದಿಬದಿ ವ್ಯಾಪಾರಿಗಳಿದ್ದು, ಹಳೇನಗರದ ವೀರಶೈವ ಸಮುದಾಯ ಭವನದಲ್ಲಿ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಲಸಿಕೆ ಹಾಕಲಾಗುತ್ತಿದೆ. ಎಲ್ಲಾ ವ್ಯಾಪಾರಿಗಳಿಗೂ ಕಡ್ಡಾಯವಾಗಿ ಲಸಿಕೆ ಹಾಕಲಾಗುತ್ತಿದ್ದು, ಮಂಗಳವಾರ ಮತ್ತು ಬುಧವಾರ ಸುಮಾರು ೧೦೦ ಬೀದಿಬದಿ ವ್ಯಾಪಾರಿಗಳಿಗೆ ಲಸಿಕೆ ಹಾಕಲಾಗಿದೆ.
ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಎಂ. ಸುಹಾಸಿನಿ, ಸಂಘಟಕರಾದ ಈಶ್ವರಪ್ಪ, ಸುಮಿತ್ರ ಎಚ್. ಹರಪ್ಪನಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment