Tuesday, June 29, 2021

ಛಲವಾದಿ ಸಮಾಜದ ಅಭಿವೃದ್ಧಿಗೆ ಬದ್ಧ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನ್ಯೂಟೌನ್ ಜಯಶ್ರೀ ವೃತ್ತದಲ್ಲಿರುವ ತಾಲೂಕು ಛಲವಾದಿಗಳ(ಪ.ಜಾ) ಸಮಾಜದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ನಗರಸಭಾ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಜೂ. ೨೯: ಛಲವಾದಿ ಸಮಾಜದ ಅಭಿವೃದ್ಧಿಗೆ  ಬದ್ಧವಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು.
    ಅವರು ನ್ಯೂಟೌನ್ ಜಯಶ್ರೀ ವೃತ್ತದಲ್ಲಿರುವ ತಾಲೂಕು ಛಲವಾದಿಗಳ(ಪ.ಜಾ) ಸಮಾಜದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ನಗರಸಭಾ ಸದಸ್ಯರುಗಳಿಗೆ ಹಾಗು ವಿವಿಧ ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾಗಿರುವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಸಮಾಜದ ಹಿರಿಯ ಮುಖಂಡ ಡಿ. ನರಸಿಂಹಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜ ಬೆಳೆದು ಬಂದ ದಾರಿ ಹಾಗು ಸಮಾಜದ ಬೇಡಿಕೆಗಳನ್ನು ವಿವರಿಸಿದರು.
    ನಗರಸಭೆ ನೂತನ ಸದಸ್ಯರಾದ ಚನ್ನಪ್ಪ, ಕೆ. ಉದಯ್‌ಕುಮಾರ್, ಸರ್ವಮಂಗಳ ಮತ್ತು ಪ್ರೇಮಾ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಮಾಜದ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು.
ಸಮಾಜದ ಗೌರವಾಧ್ಯಕ್ಷ ನಾಗರಾಜ್, ಪ್ರಧಾನ ಕಾರ್ಯದರ್ಶಿ ಎಚ್.ಎಂ ಮಹಾದೇವಯ್ಯ, ಕಾರ್ಯದರ್ಶಿ ಲೋಕೇಶ್ ಮಾಳೇನಹಳ್ಳಿ, ಖಜಾಂಚಿ ಮಂಜುನಾಥ್, ನಗರಸಭಾ ಸದಸ್ಯ ಸುದೀಪ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಹಿರಿಯ ಮುಖಂಡ ಎಸ್.ಎಸ್ ಭೈರಪ್ಪ ಸ್ವಾಗತಿಸಿದರು. ಶಿಕ್ಷಕ ಎ. ತಿಪ್ಪೇಸ್ವಾಮಿ ನಿರೂಪಿಸಿದರು. ನಾಗೇಶ್ ವಂದಿಸಿದರು.

No comments:

Post a Comment