Thursday, June 17, 2021

ಸಂಕಷ್ಟಕ್ಕೆ ಒಳಗಾದವರ ನೆರವಿಗೆ ಧಾವಿಸುತ್ತಿರುವ ಯುವ ಮುಖಂಡ, ಸಮಾಜ ಸೇವಕ ಎನ್. ಗೋಕುಲ್ ಕೃಷ್ಣನ್

ಭದ್ರಾವತಿಯಲ್ಲಿ ಕೊರೋನಾ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವವರಿಗೆ ಸಮಾಜ ಸೇವಕ, ಯುವ ಮುಖಂಡ ಎನ್. ಗೋಕುಲ್ ಕೃಷ್ಣನ್ ಸ್ವಂತ ಖರ್ಚಿನಲ್ಲಿ ದಿನಸಿ ಸಾಮಗ್ರಿಗಳನ್ನು ವಿತರಿಸುತ್ತಿರುವುದು.
   ಭದ್ರಾವತಿ, ಜೂ. ೧೭: ನಗರದಲ್ಲಿ ಹಲವು ಮಂದಿ ದಾನಿಗಳು ತಮ್ಮ ಸ್ವಂತ ಹಣದಲ್ಲಿ ಕೊರೋನಾ ಸಂಕಷ್ಟದ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ಮುಂದಾಗುತ್ತಿದ್ದು, ಕೆಲವರು ಎಲೆಮರೆ ಕಾಯಿಯಂತೆ ಸೇವಾ ಕಾರ್ಯ ನೆರವೇರಿಸಿಕೊಂಡು ಬರುತ್ತಿದ್ದಾರೆ.  ಈ ಪೈಕಿ ಸಮಾಜ ಸೇವಕ, ಬಿಜೆಪಿ ಯುವ  ಮುಖಂಡ ಎನ್ ಗೋಕುಲ್ ಕೃಷ್ಣನ್ ಸಹ ಒಬ್ಬರಾಗಿದ್ದಾರೆ.
   ಹಿರಿಯೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ಗೋಕುಲ್ ಕೃಷ್ಣನ್ ಧಾವಿಸುತ್ತಿದ್ದು, ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ಮೂಲದಿಂದ ಸಂಕಷ್ಟಕ್ಕೆ ಒಳಗಾಗಿರುವ ಮಾಹಿತಿ ತಿಳಿದು ಬಂದಲ್ಲಿ ತಕ್ಷಣ ಸ್ಪಂದಿಸುವ ಮನೋಭಾವ ರೂಪಿಸಿಕೊಂಡಿದ್ದಾರೆ.
    ಬಿಜೆಪಿ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡಿರುವ ಗೋಕುಲ್ ಸೇವೆಯೆ ಸಂಘಟನೆ ಎಂಬುದನ್ನು ಅರಿತುಕೊಂಡಿದ್ದಾರೆ. ತೀರ ಸಂಕಷ್ಟಕ್ಕೆ ಒಳಗಾದ ಕಡುಬಡವರಿಗೆ ದಿನಸಿ ಸಾಮಗ್ರಿ ವಿತರಣೆ, ಸೋಂಕಿತ ಪ್ರದೇಶಗಳಲ್ಲಿ ಸ್ಯಾನಿಟೈಜರ್ ಸಿಂಪಡಣೆ, ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಆರ್ಥಿಕ ನೆರವು ಸೇರಿದಂತೆ ಹಲವು ರೀತಿಯಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಇದೀಗ ಗೋಕುಲ್ ಆಕರ್ಷಕ ಕೇಂದ್ರ ಬಿಂದುವಾಗಿ ಕಂಗೊಳಿಸುತ್ತಿದ್ದಾರೆ.

No comments:

Post a Comment