Sunday, June 20, 2021

ನಗರಸಭೆ ಸದಸ್ಯ ಬಿ.ಕೆ ಮೋಹನ್ ೬೦ನೇ ಹುಟ್ಟುಹಬ್ಬ ಆಚರಿಸಿದ ಗ್ರಾಮಾಂತರ ಯುವ ಕಾಂಗ್ರೆಸ್

ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ, ನಗರಸಭೆ ಸದಸ್ಯ ಬಿ.ಕೆ ಮೋಹನ್‌ರವರ ೬೦ನೇ ಹುಟ್ಟುಹಬ್ಬದ ಅಂಗವಾಗಿ ಭಾನುವಾರ  ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಜನ್ನಾಪುರ ಜಯಶ್ರೀ ವೃತ್ತದಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
   ಭದ್ರಾವತಿ, ಜೂ. ೨೦: ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ, ನಗರಸಭೆ ಸದಸ್ಯ ಬಿ.ಕೆ ಮೋಹನ್‌ರವರ ೬೦ನೇ ಹುಟ್ಟುಹಬ್ಬದ ಅಂಗವಾಗಿ ಭಾನುವಾರ  ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಜನ್ನಾಪುರ ಜಯಶ್ರೀ ವೃತ್ತದಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
   ಹುಟ್ಟುಹಬ್ಬಕ್ಕೆ ಶುಭಕೋರಿದ ಯುವ ಕಾಂಗ್ರೆಸ್ ಮುಖಂಡರು ಗ್ರಾಮಾಂತರ ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಸಹಕಾರ ನೀಡುವಂತೆ ಕೋರಿದರು.
    ಅಧ್ಯಕ್ಷ ಅಫ್ತಾಬ್ ಅಹಮದ್, ಉಪಾಧ್ಯಕ್ಷರಾದ ಪ್ರವೀಣ್ ಕಲ್ಪನಹಳ್ಳಿ, ತಬ್ರೆಜ್ ಖಾನ್, ನಗರಸಭೆ ಸದಸ್ಯರಾದ ಬಿ.ಎಂ ಮಂಜುನಾಥ್, ಯುವ ಮುಖಂಡರಾದ ಬಿ.ಎಸ್ ಗಣೇಶ್, ಕೆ.ಎನ್ ನಾಗೇಶ್, ಸಜ್ಜಾದ್, ಫೈಸಲ್, ಅಭಿ, ಸಮೀರ್,  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


No comments:

Post a Comment