Wednesday, June 30, 2021

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ : ವಿಐಎಸ್‌ಎಲ್ ಕಾರ್ಮಿಕರಿಂದ ನಡೆದ ೩ ದಿನಗಳ ಹೋರಾಟ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ಮುಷ್ಕರ ನಡೆಸಿದರು.
    ಭದ್ರಾವತಿ, ಜೂ. ೩೦: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ಮುಷ್ಕರ ನಡೆಸಿದರು.
    ಕಾರ್ಖಾನೆ ಮುಂಭಾಗ ಬೆಳಿಗ್ಗೆ ಮುಷ್ಕರ ಆರಂಭಿಸಿದ ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಉಕ್ಕು ಪ್ರಾಧಿಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವೇತನ ಪರಿಷ್ಕರಣೆ ಅವಧಿ ಮುಕ್ತಾಯಗೊಂಡು ಸುಮಾರು ೫ ವರ್ಷಗಳು ಕಳೆದರೂ ಸಹ ಇದುವರೆಗೂ ವೇತನ ಪರಿಷ್ಕರಣೆ ಮಾಡಿರುವುದಿಲ್ಲ.  ತಕ್ಷಣ ಕಾಯಂ ಹಾಗು ಗುತ್ತಿಗೆ ಕಾರ್ಮಿಕರಿಗೆ ವೇತನ ಪರಿಷ್ಕರಣೆ ಮಾಡುವಂತೆ ಒತ್ತಾಯಿಸಿದರು.
   ಕಾರ್ಮಿಕರಿಗೆ ನ್ಯಾಯಸಮ್ಮತವಾಗಿ ಸಿಗಬೇಕಾದ ಶೇ.೧೫ ಎಂಜಿಬಿ, ಶೇ.೩೫ ಪರ್ಕ್ಸ್ ಹಾಗು ಶೇ.೯ ಪೆನ್ಸನ್ ವಂತಿಗೆ ನೀಡುವ ಜೊತೆಗೆ ವೆಲೆಫೇರ್ ಅಲೋಯನ್ಸ್ ಹೆಚ್ಚಿಸುವಂತೆ ಹಾಗು ಕೋವಿಡ್-೧೯ ಸೋಂಕಿಗೆ ಒಳಗಾದ ಕಾರ್ಮಿಕರ ಅವಲಂಬಿತರಿಗೆ ಉದ್ಯೋಗ ಕಲ್ಪಿಸಿಕೊಡುವಂತೆ ಆಗ್ರಹಿಸಿದರು.
    ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಹೋರಾಟದ ನೇತೃತ್ವ ವಹಿಸಿದ್ದರು. ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.  
   ಸೋಮವಾರ ಕಪ್ಪುಪಟ್ಟಿ ಧರಿಸಿ ಹಾಗು ಮಂಗಳವಾರ ಸತ್ಯಾಗ್ರಹ ಮೂಲಕ ಹೋರಾಟ ನಡೆಸಲಾಯಿತು. ಒಟ್ಟು ೩ ದಿನಗಳ ಕಾಲ ನಡೆದ ಹೋರಾಟ ಯಶಸ್ವಿಯಾಗಿ ಮುಕ್ತಾಯಗೊಂಡಿತು.


No comments:

Post a Comment