Thursday, June 17, 2021

ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಪ್ರೊ. ಬಿ. ಕೃಷ್ಣಪ್ಪ ಹುಟ್ಟುಹಬ್ಬ

ಭದ್ರಾವತಿ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ, ಹೋರಾಟಗಾರ ಪ್ರೊ. ಬಿ. ಕೃಷ್ಣಪ್ಪನವರ ಜನ್ಮದಿನ ಆಚರಿಸಲಾಯಿತು.
    ಭದ್ರಾವತಿ, ಜೂ. ೧೭: ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ, ಹೋರಾಟಗಾರ ಪ್ರೊ. ಬಿ. ಕೃಷ್ಣಪ್ಪನವರ ಜನ್ಮದಿನ ಆಚರಿಸಲಾಯಿತು.
   ಅಂಧ ವಿಕಲಚೇತನರೊಂದಿಗೆ ನಡೆದ ಕಾರ್ಯಕ್ರಮದಲ್ಲಿ ದಲಿತ ನೌಕರರ ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷ, ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ ಮಾತನಾಡಿ, ಪ್ರೊ. ಬಿ. ಕೃಷ್ಣಪ್ಪನವರ ಆದರ್ಶ ಗುಣಗಳು ಇಂದಿನ ಹೋರಾಟಗಳಿಗೆ ಸ್ಪೂರ್ತಿದಾಯಕವಾಗಿವೆ. ಅವರು ರೂಪಿಸಿಕೊಟ್ಟಿರುವ ದಾರಿಯಲ್ಲಿ ನಾವೆಲ್ಲರೂ ಸಾಗಬೇಕೆಂದರು.
    ಡಿಎಸ್‌ಎಸ್ ತಾಲೂಕು ಸಂಚಾಲಕ ಆರ್. ರವಿನಾಯ್ಕ ನೇತೃತ್ವ ವಹಿಸಿದ್ದರು. ನಗರ ಸಂಚಾಲಕ ಆರ್. ತಮ್ಮಯ್ಯ, ಸಂಘಟನಾ ಸಂಚಾಲಕರಾದ ನಾಗರಾಜ್, ನಾಗೇಶ್, ಉಬೇದ್ ಅಹಮದ್,  ಶಿವನಾಯ್ಕ, ಮಂಜುನಾಥ್, ವಿಜಯ್ ಕಾಕೆಡ್, ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment