ಭದ್ರಾವತಿ, ಜೂ. ೧೧: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ತಾಲೂಕಿನಾದ್ಯಂತ ಜೂ.೧೨ ಮತ್ತು ೧೩ ಎರಡು ದಿನ ಸಂಪೂರ್ಣ ಲಾಕ್ಡೌನ್ ಘೋಷಿಸಲಾಗಿದೆ.
ಹಾಲು ಮತ್ತು ಔಷಧಿ ಅಂಗಡಿ(ಮೆಡಿಕಲ್ಸ್) ಹೊರತುಪಡಿಸಿ ಮತ್ತು ಪೆಟ್ರೋಲ್ ಬಂಕ್, ರಸಗೊಬ್ಬರ ಅಂಗಡಿಗಳನ್ನು ಬೆಳಿಗ್ಗೆ ೬ ಗಂಟೆಯಿಂದ ೧೦ ಗಂಟೆವರೆಗೆ ಮಾತ್ರ ತೆರೆಯಲು ಅವಕಾಶವಿದ್ದು, ಉಳಿದಂತೆ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಅಲ್ಲದೆ ಅನಾವಶ್ಯಕ ಜನಸಂಚಾರ ಸಹ ನಿಷೇಧಿಸಲಾಗಿದೆ ಎಂದು ತಹಸೀಲ್ದಾರ್ ಜಿ. ಸಂತೋಷ್ಕುಮಾರ್ ತಿಳಿಸಿದ್ದಾರೆ.
No comments:
Post a Comment