Wednesday, July 28, 2021

ವಿವಿಧ ವೃತ್ತಿ ತರಗತಿಗಳಿಗೆ ಪ್ರವೇಶ ಪಡೆದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು

     ಭದ್ರಾವತಿ, ಜು. ೨೮: ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ವಿವಿಧ ವೃತ್ತಿ ತರಗತಿಗಳ ವ್ಯಾಸಂಗಕ್ಕೆ ಪ್ರವೇಶ ಪಡೆದಿರುವ ಜನಾಂಗದ ವಿದ್ಯಾರ್ಥಿಗಳಿಗೆ  ಆರ್ಥಿಕ ನೆರವು ನೀಡಲು ತೀರ್ಮಾನಿಸಲಾಗಿದೆ.
      ವೈದ್ಯಕೀಯ, ತಾಂತ್ರಿಕ ಶಿಕ್ಷಣಗಳಾದ ಎಂ.ಟೆಕ್, ಬಿ.ಇ, ಎಂ.ಸಿ.ಎ, ಡಿಪ್ಲೋಮಾ, ಐಟಿಐ, ಬಿ.ಎಸ್ಸಿ, ಎ.ಜಿ ಮತ್ತು ಎಂ.ಎಸ್ಸಿ, ಎ.ಜಿ ಮತ್ತು ಮಿಡ್ವೈಡ್ ಟ್ರೈನಿಂಗ್(ಎ.ಎನ್.ಎಂ), ಸರ್ಕಾರಿ ಟೀಚರ್ ಟ್ರೈನಿಂಗ್(ಎನ್.ಟಿ.ಟಿ ಮತ್ತು ಡಿ.ಇಡಿ) ಇತ್ಯಾದಿ ವೃತ್ತಿ ತರಗತಿಗಳ ವ್ಯಾಸಂಗಕ್ಕೆ ಪ್ರವೇಶ ಪಡೆದವರು ಭದ್ರಾವತಿ ತಾಲೂಕು ಒಕ್ಕಲಿಗರ ಸಂಘ, ಕೆಂಪೇಗೌಡ ಸಮುದಾಯ ಭವನ, ಅಪ್ಪರ್ ಹುತ್ತಾ, ಭದ್ರಾವತಿ. ವಿಳಾಸದ ಸಂಘದ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
     ಇದೆ ರೀತಿ ೨೦೧೯-೨೦ ಮತ್ತು ೨೦೨೦-೨೧ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ, ವೈದ್ಯಕೀಯ ಸೇರಿದಂತೆ ವೃತ್ತಿಪರ ಶಿಕ್ಷಣಗಳಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗು ಕ್ರೀಡೆ ಹಾಗು ಇನ್ನಿತರ ಚಟುವಟಿಕೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿ ಉತ್ತಮ ಸಾಧನೆ ಮಾಡಿರುವವರನ್ನು ಸನ್ಮಾನಿಸಿ ಗೌರವಿಸಲು ತೀರ್ಮಾನಿಸಲಾಗಿದೆ. ಹೆಚ್ಚಿನ ಮಹಿತಿಗೆ ಸಂಘದ ಕಛೇರಿಯನ್ನು ಸಂಪರ್ಕಿಸಲು ಪ್ರಧಾನ ಕಾರ್ಯದರ್ಶಿ ಆರ್. ಪ್ರಕಾಶ್ ಕೋರಿದ್ದಾರೆ.

No comments:

Post a Comment