ಶನಿವಾರ, ಜುಲೈ 31, 2021

ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸಲು ಮನವಿ

ಭದ್ರಾವತಿಯಲ್ಲಿ ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಸರ್ಕಾರಿ ಬಸ್‌ಗಳ ಸಂಚಾರ ಆರಂಭಿಸುವಂತೆ ಒತ್ತಾಯಿಸಿ ನಗರದ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕರಿಗೆ ಕರುನಾಡು ಸಂರಕ್ಷಣಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.
     ಭದ್ರಾವತಿ, ಜು. ೩೧: ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಸರ್ಕಾರಿ ಬಸ್‌ಗಳ ಸಂಚಾರ ಆರಂಭಿಸುವಂತೆ ಒತ್ತಾಯಿಸಿ ನಗರದ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕರಿಗೆ ಕರುನಾಡು ಸಂರಕ್ಷಣಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.
     ಕೋವಿಡ್-೧೯ರ ಹಿನ್ನಲೆಯಲ್ಲಿ ಜನಸಾಮಾನ್ಯರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಲಾಕ್‌ಡೌನ್ ಅವಧಿಯಲ್ಲಿ ಸ್ಥಗಿತಗೊಂಡಿರುವ ನಗರ ಮತ್ತು ಗ್ರಾಮಾಂತರ ಭಾಗದ ಸರ್ಕಾರಿ ಬಸ್‌ಗಳ ಸಂಚಾರವನ್ನು ಇದುವರೆಗೂ ಪುನಃ ಆರಂಭಿಸಿಲ್ಲ. ಈಗಾಗಲೇ ಖಾಸಗಿ ಬಸ್‌ಗಳ ಸಂಚಾರ ಆರಂಭಗೊಂಡಿದ್ದು, ಖಾಸಗಿ ಬಸ್‌ಗಳು ದುಬಾರಿ ದರ ನಿಗದಿಪಡಿಸಿರುವುದರಿಂದ ಕೂಲಿ ಕಾರ್ಮಿಕರು, ಕೃಷಿಕರು ಸೇರಿದಂತೆ ಜನಸಾಮಾನ್ಯರಿಗೆ ಹೆಚ್ಚಿನ ಅನಾನುಕೂಲವಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಸರ್ಕಾರಿ ಬಸ್‌ಗಳ ಸಂಚಾರ ಆರಂಭಿಸಿ ಅನುಕೂಲ ಕಲ್ಪಿಸಿಕೊಡುವಂತೆ ಕೋರಲಾಗಿದೆ.
    ವೇದಿಕೆ ಜಿಲ್ಲಾಧ್ಯಕ್ಷ ಶಿವಮೂರ್ತಿ, ರಾಜ್ಯ ಸಂಚಾಲಕ ಎಂ. ನಂಜುಂಡಪ್ಪ, ರಾಜಶೇಖರ್, ಮಂಜಾನಾಯ್ಕ, ರವಿನಾಯ್ಕ ಮತ್ತು ಚಂದ್ರಶೇಖರ್ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ