ಭದ್ರಾವತಿ, ಜು. ೧೩: ತಾಲೂಕಿನಲ್ಲಿ ಮಂಗಳವಾರ ೬ ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಒಟ್ಟು ೪೮೧ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೪ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಗ್ರಾಮಾಂತರ ಭಾಗದಲ್ಲಿ ಒಬ್ಬರು ಹಾಗು ನಗರ ಭಾಗದಲ್ಲಿ ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದುವರೆಗೂ ಒಟ್ಟು ೭೪೪೫ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೭೩೮೩ ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ ೬೨ ಸಕ್ರಿಯ ಪ್ರಕರಣ ಬಾಕಿ ಇದ್ದು, ಇದುವರೆಗೂ ಸೋಂಕಿನಿಂದ ಒಟ್ಟು ೧೪೯ ಮಂದಿ ಮೃತಪಟ್ಟಿದ್ದಾರೆ.
ನಗರ ಭಾಗದಲ್ಲಿ ಒಟ್ಟು ೪ ಕಂಟೈನ್ಮೆಂಟ್ ಜೋನ್ಗಳು ಸಕ್ರಿಯವಾಗಿದ್ದು, ಇದುವರೆಗೂ ೧೬೬ ಜೋನ್ಗಳನ್ನು ತೆರವುಗೊಳಿಸಲಾಗಿದೆ. ಗ್ರಾಮಾಂತರ ಭಾಗದಲ್ಲಿ ೫ ಜೋನ್ಗಳು ಸಕ್ರಿಯವಾಗಿದ್ದು, ೪೪ ಜೋನ್ಗಳನ್ನು ಇದುವರೆಗೂ ತೆರವುಗೊಳಿಸಲಾಗಿದೆ.
No comments:
Post a Comment