ಶನಿವಾರ, ಜುಲೈ 17, 2021

ಜು.೧೮ರಂದು ಬಿಜೆಪಿ ಮಂಡಲ ಸಭೆ

     ಭದ್ರಾವತಿ, ಜು. ೧೭: ಭಾರತೀಯ ಜನತಾ ಪಕ್ಷದ ವತಿಯಿಂದ ಜು.೧೮ರಂದು ಬೆಳಿಗ್ಗೆ ೧೦.೩೦ಕ್ಕೆ ಹಳೇನಗರದ ಶ್ರೀ ಕೋಟೆ ಬಸವೇಶ್ವರ ದೇವಸ್ಥಾನದಲ್ಲಿ ಮಂಡಲ ಸಭೆ ಹಮ್ಮಿಕೊಳ್ಳಲಾಗಿದೆ.
    ಸಭೆಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ವಿಭಾಗದ ಪ್ರಭಾರಿ ಗಿರೀಶ್ ಪಟೇಲ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ.
    ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ