Monday, July 19, 2021

ಭದ್ರಾವತಿಯಲ್ಲಿ ೧೨ ಸೋಂಕು ಪತ್ತೆ

ಭದ್ರಾವತಿ, ಜು. ೧೯: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, ಆದರೂ ಸಹ ಆತಂಕ ಎದುರಾಗಿದೆ. ಸೋಮವಾರ ೧೨ ಸೋಂಕು ದೃಢಪಟ್ಟಿದ್ದು, ಒಬ್ಬರು ಬಲಿಯಾಗಿದ್ದಾರೆ.
      ಒಟ್ಟು ೭೮೨ ಮಾದರಿ ಸಂಗ್ರಹಿಸಲಾಗಿದ್ದು, ಗ್ರಾಮಾಂತರ ಭಾಗದಲ್ಲಿ ೩ ಹಾಗು ನಗರ ಭಾಗದಲ್ಲಿ ೯ ಸೇರಿದಂತೆ ಒಟ್ಟು ೧೨ ಜನರಲ್ಲಿ ಸೋಂಕು ಪತ್ತೆಯಾಗಿದೆ. ೪ ಜನ ಆಸ್ಪತ್ರೆಗಳಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ತಾಲೂಕಿನಲ್ಲಿ ಇದುವರೆಗೂ ಒಟ್ಟು ೭೫೦೧ ಜನರಿಗೆ ಸೋಂಕು ತಗುಲಿದ್ದು, ಈ ಪೈಕಿ ೭೪೫೩ ಜನರು ಗುಣಮುಖರಾಗಿದ್ದಾರೆ. ಒಟ್ಟು ೪೮ ಸಕ್ರಿಯ ಪ್ರಕರಣಗಳಿದ್ದು, ನಗರ ಭಾಗದಲ್ಲಿ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
    ಇದುವರೆಗೂ ಸೋಂಕಿಗೆ ೧೫೫ ಜನರು ಬಲಿಯಾಗಿದ್ದಾರೆ. ನಗರ ಭಾಗದಲ್ಲಿ ೨ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿದ್ದು, ಇದುವರೆಗೂ ೧೨೦ ಜೋನ್‌ಗಳನ್ನು ತೆರವುಗೊಳಿಸಲಾಗಿದೆ.

No comments:

Post a Comment