ಭದ್ರಾವತಿ ನಗರದಲ್ಲಿ ಕಳೆದ ೫-೬ ದಿನಗಳಿಂದ ಮಳೆಯಾಗುತ್ತಿದ್ದು, ಜನಜೀವನ ಸ್ವಲ್ಪಮಟ್ಟಿಗೆ ಅಸ್ತವ್ಯಸ್ತಗೊಂಡಿದೆ.
ಭದ್ರಾವತಿ, ಜು. ೨೩: ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬಹುತೇಕ ಕೆರೆಕಟ್ಟೆಗಳು, ಹಳ್ಳಕೊಳ್ಳಗಳು ಭರ್ತಿಯಾಗಿದ್ದು, ಬೆಳೆ ಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಮುಂದಿನ ೨-೩ ದಿನ ಇದೆ ರೀತಿ ಮಳೆಯಾದಲ್ಲಿ ಜಮೀನುಗಳಲ್ಲಿ ನೀರು ನಿಂತುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಇದರಿಂದ ಬೆಲೆ ಹಾನಿಯಾಗಲಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಉಳಿದಂತೆ ನಗರಸಭೆ ವ್ಯಾಪ್ತಿಯಲ್ಲಿ ಕಳೆದ ೩ ದಿನಗಳಿಂದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ. ಕೆಲವೆಡೆ ಚರಂಡಿಗಳಲ್ಲಿ ಕಸಕಡ್ಡಿಕಟ್ಟಿಕೊಂಡು ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ಇದರಿಂದಾಗಿ ವಾಹನ ಸವಾರು ಹಾಗು ಪಾದಚಾರಿಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ಇದುವರೆಗೂ ನಗರಸಭೆ ವ್ಯಾಪ್ತಿಯಲ್ಲಿ ಮಳೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಪೌರಾಯುಕ್ತ ಕೆ. ಪರಮೇಶ್ ತಿಳಿಸಿದ್ದಾರೆ.
ಸಹಾಯವಾಣಿ ಕೇಂದ್ರ:
ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ತಾಲೂಕು ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಹೆಲ್ಪ್ ಡೆಸ್ಕ್ ಸಹಾಯವಾಣಿ ಕೇಂದ್ರ ಆರಂಭಿಸಿದ್ದು, ದೂರವಾಣಿ ಸಂಖ್ಯೆ ೦೮೨೮೨-೨೬೩೪೬೬ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ತುರ್ತು ಸಂದರ್ಭಗಳಲ್ಲಿ ಸಮೀಪದ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ. ತಹಸೀಲ್ದಾರ್ ಮೊ: ೯೯೧೬೨೦೧೧೩೫, ತಹಸೀಲ್ದಾರ್ ಗ್ರೇಡ್-೨ ಮೊ: ೯೬೬೩೭೫೪೧೮೧, ಶಿರಸ್ತೇದಾರ್ ಮೊ: ೭೮೯೨೫೯೫೪೬೫, ಉಪ ತಹಸೀಲ್ದಾರ್ ಕೂಡ್ಲಿಗೆರೆ ಮೊ: ೯೯೦೦೮೦೦೬೪೮, ಉಪ ತಹಸೀಲ್ದಾರ್ ಆನವೇರಿ ಮೊ: ೯೧೧೦೬೪೨೧೪೬, ಉಪ ತಹಸೀಲ್ದಾರ್ ಕಲ್ಲಿಹಾಳ್ ಮತ್ತು ಹೊಳೆಹೊನ್ನೂರು ಮೊ: ೯೪೪೯೬೮೬೪೭೪, ರಾಜಸ್ವ ನಿರೀಕ್ಷಕರು ಕಸಬಾ ಹೋಬಳಿ ಮೊ: ೯೯೮೦೫೫೧೧೪೯, ರಾಜಸ್ವ ನಿರೀಕ್ಷಕರು ಕೂಡ್ಲಿಗೆರೆ ಹೋಬಳಿ ಮೊ: ೭೮೧೩೦೪೩೨೪೧, ರಾಜಸ್ವ ನಿರೀಕ್ಷಕರು ಹೊಳೆಹೊನ್ನೂರು ಹೋಬಳಿ ಮೊ: ೯೯೪೫೫೭೫೩೩೦ ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.
No comments:
Post a Comment