ಭದ್ರಾವತಿ ಹುತ್ತಾಕಾಲೋನಿ ಚಂದ್ರಾಲಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಶಾಸರದ ಅಪ್ಪಾಜಿ ಅವರನ್ನು ಸನ್ಮಾನಿಸಲಾಯಿತು.
ಭದ್ರಾವತಿ, ಜು. ೨೧: ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಜಾತ್ಯಾತೀತ ಜನತಾದಳ ಕ್ಷೇತ್ರದಲ್ಲಿ ಹೆಚ್ಚು ಸಂಘಟಿತಗೊಳ್ಳುವ ಉದ್ದೇಶದಿಂದ ಹೊಸ ಪದಾಧಿಕಾರಿಗಳ ಆಯ್ಕೆಗೆ ಮುಂದಾಗಿದೆ.
ಈ ಸಂಬಂಧ ಬುಧವಾರ ಹುತ್ತಾಕಾಲೋನಿ ಚಂದ್ರಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಹಾಗು ಕಾರ್ಯಕರ್ತರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಹೋರಾಟದ ಆದರ್ಶಗಳನ್ನು ಮುಂದಿಟ್ಟುಕೊಂಡು ಪಕ್ಷವನ್ನು ಪ್ರಬಲವಾಗಿ ಸಂಘಟಿಸುವ ಅಗತ್ಯವಿದ್ದು, ಈ ಹಿನ್ನಲೆಯಲ್ಲಿ ಶಾರದ ಅಪ್ಪಾಜಿಯವರನ್ನು ಪ್ರತಿಯೊಬ್ಬರು ಬೆಂಬಲಿಸುವ ಜೊತೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಅವರ ವಿವೇಚನೆಗೆ ನೀಡಬೇಕೆಂಬ ಒಮ್ಮತದ ತೀರ್ಮಾನ ಸಭೆಯಲ್ಲಿ ಕೈಗೊಳ್ಳಲಾಯಿತು.
ಪಕ್ಷದ ತಾಲೂಕು ಅಧ್ಯಕ್ಷ, ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾರದ ಅಪ್ಪಾಜಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜೆ.ಪಿ ಯೋಗೇಶ್, ಎಸ್. ಮಣಿಶೇಖರ್, ಮುಖಂಡರಾದ ಡಿ.ಟಿ ಶ್ರೀಧರ್, ಕರಿಯಪ್ಪ, ಬದರಿನಾರಾಯಣ, ಎಂ.ಎ ಅಜಿತ್, ಮೈಲಾರಪ್ಪ, ತಾಲೂಕು ಪಂಚಾಯಿತಿ ಹಾಗು ನಗರಸಭೆ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment