Thursday, July 29, 2021

ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಇನ್ನೂ ಹೆಚ್ಚಿನ ಸಂಘಟನೆ ಅಗತ್ಯ : ಬಿ.ಕೆ ಶ್ರೀನಾಥ್

ಭದ್ರಾವತಿ ಹಳೇನಗರದ ಶ್ರೀ ಕೋಟೆ ಬಸವಣ್ಣ ದೇವಸ್ಥಾನದ ಸಮುದಾಯಭವನದಲ್ಲಿ ಗುರುವಾರ ಬಿಜೆಪಿ ಮಂಡಲ ಸಭೆ ನಡೆಯಿತು.
     ಭದ್ರಾವತಿ, ಜು. ೨೯: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಪ್ರಬಲವಾಗಿದ್ದು, ಮತ್ತಷ್ಟು ಸಂಘಟಿಸುವ ಪ್ರಯತ್ನಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್ ಹೇಳಿದರು.
    ಅವರು ಗುರುವಾರ ಹಳೇನಗರದ ಶ್ರೀ ಕೋಟೆ ಬಸವಣ್ಣ ದೇವಸ್ಥಾನದ ಸಮುದಾಯಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಂಡಲ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.
    ಇತ್ತೀಚೆಗೆ ನಡೆದ ನಗರಸಭೆ ಹಾಗು ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ ಪ್ರಬಲ ಪೈಪೋಟಿ ನೀಡಿದ್ದು, ಉತ್ತಮ ಸಾಧನೆ ತೋರಿಸಿದೆ. ಕ್ಷೇತ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯದಿದ್ದರೂ ಸಹ ರಾಜ್ಯ ಹಾಗು ಕೇಂದ್ರ ಸರ್ಕಾರಗಳ ಬಹಳಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಪಕ್ಷ ಸಂಘಟನೆಯಾಗಬೇಕೆಂದರು.
    ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಕ್ಷದ ಪ್ರಮುಖರಾದ ಆರ್.ಎಸ್ ಶೋಭಾ, ಎಂ.ಎಸ್ ಸುರೇಶಪ್ಪ, ರಮೇಶ್, ಜಿ. ಆನಂದಕುಮಾರ್,  ಯುವ  ಘಟಕದ ಅಧ್ಯಕ್ಷ ವಿಜಯ್, ಕೆ. ಮಂಜಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಅನ್ನಪೂರ್ಣ ಸಾವಂತ್, ಗೌರಮ್ಮ, ಉಮಾವತಿ, ಗಿರೀಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
    ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್ ಸ್ವಾಗತಿಸಿದರು. ಹನುಮಂತನಾಯ್ಕ ನಿರೂಪಿಸಿದರು. ಗಾಯಿತ್ರಿ ಪ್ರಾರ್ಥಿಸಿದರು.

No comments:

Post a Comment