Wednesday, July 7, 2021

ದೇಹದಾರ್ಢ್ಯ ಪಟು ನಂಜುಂಡಿ ನಿಧನ

ನಂಜುಂಡಿ
     ಭದ್ರಾವತಿ, ಜು. ೭: ಕಾಗದನಗರದ ನಿವಾಸಿ, ದೇಹದಾರ್ಢ್ಯ ಪಟು ನಂಜುಂಡಿ(೪೫) ನಿಧನ ಹೊಂದಿದ್ದು, ಇವರ ಅಂತ್ಯಕ್ರಿಯೆ ಬುಧವಾರ ಸಂಜೆ ಬೈಪಾಸ್ ಹೊಸಬುಳ್ಳಾಪುರ ಶ್ರೀ ಸತ್ಯಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
     ಪತ್ನಿ, ಓರ್ವ ಪುತ್ರ ಇದ್ದರು. ಅಪಘಾತದಲ್ಲಿ ಗಾಯಗೊಂಡು ಕಳೆದ ಸುಮಾರು ಒಂದೂವರೆ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರ ಸಹೋದರ ಹುಡ್ಕೋಕಾಲೋನಿಯ ಲಕ್ಷ್ಮಣ ಅವರ ನಿವಾಸದಲ್ಲಿ ಬೆಳಿಗ್ಗೆ ನಿಧನ ಹೊಂದಿದರು.
    ಸುಮಾರು ೨ ದಶಕಗಳ ಹಿಂದೆಯೇ ನಂಜುಂಡಿ ದೇಹದಾರ್ಢ್ಯ ಪಟುವಾಗಿ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿದ್ದರು. ಹಲವಾರು ಪ್ರಶಸ್ತಿ, ಬಿರುದುಗಳನ್ನು ಪಡೆದುಕೊಂಡಿದ್ದರು. ಎಂಪಿಎಂ ವ್ಯಾಯಾಮ ಶಾಲೆಯಲ್ಲಿ ತರಬೇತಿದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
    ಇವರ ನಿಧನಕ್ಕೆ ಛಲವಾದಿ ಮಹಾಸಭಾ ಅಧ್ಯಕ್ಷ ಸುರೇಶ್ ಮತ್ತು ಪದಾಧಿಕಾರಿಗಳು, ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಹಾಗು ದೇಹದಾರ್ಢ್ಯ ಪಟುಗಳು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

No comments:

Post a Comment