Wednesday, July 7, 2021

ಎಟಿಎಂ ಕಳ್ಳತನಕ್ಕೆ ಯತ್ನ : ಓರ್ವನ ಸೆರೆ

ಭದ್ರಾವತಿ, ಜು. ೭: ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದ ಬಳಿ ಇರುವ ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ.
    ತಾಲೂಕಿನ ಅರಳಿಹಳ್ಳಿ ಬಸಲಿಕಟ್ಟೆ ನಿವಾಸಿ, ಟ್ರ್ಯಾಕ್ಟರ್ ಚಾಲಕ ಅಸಾದುಲ್ಲಾ ಅಲಿಯಾಸ್ ಹರ್ಷದ್(೩೨) ಎಂಬಾತನನ್ನು ಬಂಧಿಸಲಾಗಿದ್ದು, ಈತ ಜು.೫ರ ರಾತ್ರಿ ೮ ಗಂಟೆ ಸಮಯದಲ್ಲಿ ಎಟಿಎಂ ಒಳಗೆ ಪ್ರವೇಶಿಸಿ ಕಳ್ಳತನಕ್ಕೆ ಯತ್ನಿಸಿ ವಿಫಲನಾಗಿದ್ದಾನೆ. ಈ ಕುರಿತು ಬ್ಯಾಂಕ್ ಶಾಖಾ ವ್ಯವಸ್ಥಾಪಕ ತಮ್ಮಯ್ಯದಾಸ ಪೊಲೀಸರಿಗೆ ದೂರು ಸಲ್ಲಿಸಿದ್ದರು.
     ದೂರಿನ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ನಡೆಸಿದ ತಂಡವನ್ನು ಜಿಲ್ಲಾ ರಕ್ಷಣಾಧಿಕಾರಿ ಅಭಿನಂದಿಸಿದ್ದಾರೆ.

No comments:

Post a Comment