ಭಾನುಮತಿ
ಭದ್ರಾವತಿ, ಜು. ೨೭: ನಗರದ ಮೈಸೂರು ಕಾಗದ ಕಾರ್ಖಾನೆ ಕಾರ್ಮಿಕರ ಸಂಘದ ಮಾಜಿ ಅಧ್ಯಕ್ಷ ಎಸ್. ಚಂದ್ರಶೇಖರ್ ಅವರ ತಾಯಿ ಭಾನುಮತಿ(೮೫) ನಿಧನ ಹೊಂದಿದರು.
ಶಿವಮೊಗ್ಗ ವಿನೋಬನಗರದಲ್ಲಿರುವ ಸಹೋದರಿ ನಿವಾಸದಲ್ಲಿ ಸೋಮವಾರ ರಾತ್ರಿ ನಿಧನ ಹೊಂದಿದ್ದು, ಮಂಗಳವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿತು. ಭಾನುಮತಿ ಅವರಿಗೆ ಪುತ್ರ ಚಂದ್ರಶೇಖರ್ ಹಾಗು ೩ ಪುತ್ರಿಯರು ಮತ್ತು ಅಳಿಯಂದಿರು, ಮೊಮ್ಮಕ್ಕಳು ಇದ್ದರು. ಇವರ ನಿಧನಕ್ಕೆ ಎಂಪಿಎಂ ಕಾರ್ಮಿಕರು, ಬಿಜೆಪಿ ಜಿಲ್ಲಾ ಹಾಗು ಸ್ಥಳೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.
No comments:
Post a Comment