Monday, July 12, 2021

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ನಿರೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಭದ್ರಾವತಿ ತಾಲೂಕು ಶಾಖೆ ವತಿಯಿಂದ ಸೋಮವಾರ ನಗರದ ಸಿ.ಎನ್ ರಸ್ತೆಯಲ್ಲಿರುವ ಕಾರ್ಮಿಕ ನಿರೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜು. ೧೨: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ತಾಲೂಕು ಶಾಖೆ ವತಿಯಿಂದ ಸೋಮವಾರ ನಗರದ ಸಿ.ಎನ್ ರಸ್ತೆಯಲ್ಲಿರುವ ಕಾರ್ಮಿಕ ನಿರೀಕ್ಷಕರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಕೋವಿಡ್-೧೯ರ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಬಡ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ೩ ಸಾವಿರ ರು. ಆರ್ಥಿಕ ನೆರವನ್ನು ೧೦ ಸಾವಿರ ರು.ಗಳಿಗೆ ಹೆಚ್ಚಿಸಬೇಕು. ದಿನಸಿ ಸಾಮಗ್ರಿ ವಿತರಣೆಯಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗಿದ್ದು, ಅಲ್ಲದೆ ಹಗರಣಗಳು ನಡೆದಿರುವುದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
    ನಗರಸಭಾ ಸದಸ್ಯ ಜಾರ್ಜ್, ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ನಾಗೇಂದ್ರ ರೆಡ್ಡಿ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ನಿಯೋಜಿತ ಅಧ್ಯಕ್ಷ ಚಂದ್ರಶೇಖರ್, ತಾಂತ್ರಿಕ ಸಲಹೆಗಾರ ಮನೋಹರ್, ಸಂಘಟನಾ ಕಾರ್ಯದರ್ಶಿ ಅಭಿಲಾಷ್, ಮಂಜು, ಸಲಹೆಗಾರ ಸಂಪತ್ ಕುಮಾರ್, ಪೈಂಟರ್ ಸಂಘದ ಗೌರವಾಧ್ಯಕ್ಷ ಶಿವಣ್ಣ, ಅಧ್ಯಕ್ಷ ಶ್ರೀನಿವಾಸ್ ಹಾಗು ಪದಾಧಿಕಾರಿಗಳು, ಇಂಜಿನಿಯರ್ ಲಕ್ಷಣ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment