ಭದ್ರಾವತಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ, ಪ್ರಧಾನ ಕಾರ್ಯದರ್ಶಿಗಳಾಗಿ ಸದಾಶಿವಮೂರ್ತಿ, ರವಿಕುಮಾರ್ ಅವರನ್ನು ನೇಮಕಗೊಳಿಸಿ ಅಭಿನಂದಿಸಿದರು.
ಭದ್ರಾವತಿ, ಜು. ೭: ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾಗಿ ಜಿ. ಸದಾಶಿವಮೂರ್ತಿ ಮತ್ತು ಎಂ. ರವಿಕುಮಾರ್ ನೇಮಕ ಗೊಂಡಿದ್ದಾರೆ.
ಜಿ. ಸದಾಶಿವಮೂರ್ತಿ ಮತ್ತು ಎಂ. ರವಿಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸೂಚನೆ ಮೇರೆಗೆ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ ನೇಮಕಗೊಳಿಸಿ ಆದೇಶಿಸಿದ್ದಾರೆ. ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದರಾಗಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ನೇಮಕಾತಿ ಆದೇಶದಲ್ಲಿ ಸೂಚಿಸಿದ್ದಾರೆ.
ಬಿಪಿಎಲ್ ಸಂಘದ ಪದಾಧಿಕಾರಿಗಳಾದ ಗೌರವಾಧ್ಯಕ್ಷ ಎಸ್.ಕೆ ಸುಧೀಂದ್ರ, ಅಧ್ಯಕ್ಷ ಎಂ. ಮುಕುಂದನ್, ಕಾರ್ಯಾಧ್ಯಕ್ಷ ಎಂ. ರವಿಕುಮಾರ್, ಉಪಾಧ್ಯಕ್ಷರಾದ ವಿಲಿಯಂ ಸಂಪತ್ ಕುಮಾರ್ ಮತ್ತು ಸ್ಯಾಮ್ಯೂಯೇಲ್, ಪ್ರಧಾನ ಕಾರ್ಯದರ್ಶಿ ಬಿ. ಜಗದೀಶ್, ಕಾರ್ಯದರ್ಶಿ ಎಂ.ಸಿ ಸುನಿಲ್ಕುಮಾರ್, ಸಹ ಕಾರ್ಯದರ್ಶಿ ಜಿ. ಗೋವಿಂದ, ಖಜಾಂಚಿ ಎ.ವಿ ಮುರುಳಿಕೃಷ್ಣ, ನಿರ್ದೇಶಕರದ ಶ್ರೀಕಾಂತ್, ನವೀನ್ಕುಮಾರ್, ಎನ್.ಆರ್ ರವೀಂದ್ರಪ್ಪ, ಸಿ. ಉಮಾಶಂಕರ್, ಕರುಣಾನಿಧಿ ಸೇರಿದಂತೆ ಇನ್ನಿತರರು ನೂತನ ಕಾರ್ಯದರ್ಶಿಗಳಾದ ಜಿ. ಸದಾಶಿವಮೂರ್ತಿ ಮತ್ತು ಎಂ. ರವಿಕುಮಾರ್ ಅವರನ್ನು ಅಭಿನಂದಿಸಿದ್ದಾರೆ.
No comments:
Post a Comment