Thursday, July 1, 2021

ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಚಾಲನೆ


ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ಸೇವಾ ಭಾರತಿ ಮತ್ತು ಪ್ರೇರಣಾ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಗುರುವಾರ ಭದ್ರಾವತಿ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು.
    ಭದ್ರಾವತಿ, ಜು. ೧: ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ಸೇವಾ ಭಾರತಿ ಮತ್ತು ಪ್ರೇರಣಾ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಗುರುವಾರ ನಗರದ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು.
    ಸೇವಾ ಭಾರತಿ ಮತ್ತು ಪ್ರೇರಣಾ ಟ್ರಸ್ಟ್ ವತಿಯಿಂದ ಭದ್ರಾವತಿಗೆ ಸುಮಾರು ೨೦೦೦ ಲಸಿಕೆಗಳನ್ನು ಉಚಿತವಾಗಿ ನೀಡಲಾಗಿದ್ದು, ಕಾಲೇಜು ವಿದ್ಯಾರ್ಥಿಗಳಿಗೆ ಹಾಗು ಬೋಧಕ ಹಾಗು ಬೋಧಕೇತರ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗುತ್ತಿದೆ.
    ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಪ್ರಾಂಶುಪಾಲರಾದ ಡಾ.ಎಂ.ಜಿ ಉಮಾಶಂಕರ್, ಡಾ. ಬಿ.ಜಿ ಧನಂಜಯ, ಕುವೆಂಪು ವಿ.ವಿ ಸಿಂಡಿಕೇಟ್ ಸದಸ್ಯ ಜಿ. ಧರ್ಮಪ್ರಸಾದ್, ಕರ್ನಾಟಕ ರಾಜ್ಯ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment