Thursday, August 12, 2021

೩೫ ಲಕ್ಷ ರು. ವೆಚ್ಚದ ಕುರುಹಿನಶೆಟ್ಟಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

ಭದ್ರಾವತಿ ಉಜ್ಜನಿಪುರ ಬೈಪಾಸ್ ರಸ್ತೆಯಲ್ಲಿರುವ ಕುರುಹಿನಶೆಟ್ಟಿ ಸಂಘದ ಸುಮಾರು ೩೫ ಲಕ್ಷ ರು. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಗುರುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು.
ಭದ್ರಾವತಿ, ಆ. ೧೨: ನಗರದ ಉಜ್ಜನಿಪುರ ಬೈಪಾಸ್ ರಸ್ತೆಯಲ್ಲಿರುವ ಕುರುಹಿನಶೆಟ್ಟಿ ಸಂಘದ ಸುಮಾರು ೩೫ ಲಕ್ಷ ರು. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಗುರುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು.
ಸಂಘದ ಅಧ್ಯಕ್ಷ ಎನ್.ಆರ್ ಜಯರಾಜ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಸಂಘದ ಗೌರವಾಧ್ಯಕ್ಷ ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಮಂಜುನಾಥಶೆಟ್ಟಿ, ಸಹಕಾರ್ಯದರ್ಶಿ ನಿತ್ಯಾನಂದ, ಜಯರಾಜ್, ಎಚ್. ತಿಮ್ಮಪ್ಪ ಸೇರಿದಂತೆ ಸಮಾಜದ ಮುಖಂಡರು, ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment