Sunday, August 29, 2021

ಬಿಳಿಕಿ ಹಿರೇಮಠಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠಕ್ಕೆ ಗೃಹ ಸಚಿವ ಅರಗಜ್ಞಾನೇಂದ್ರ ಭಾನುವಾರ ರಾತ್ರಿ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.
    ಭದ್ರಾವತಿ, ಆ. ೨೯: ತಾಲೂಕಿನ ಬಿಳಿಕಿ ಹಿರೇಮಠಕ್ಕೆ ಗೃಹ ಸಚಿವ ಅರಗಜ್ಞಾನೇಂದ್ರ ಭಾನುವಾರ ರಾತ್ರಿ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.
    ಹಿರೇಮಠದಲ್ಲಿ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ರಾತ್ರಿ ಆಗಮಿಸಿ ಶ್ರೀಗಳಿಗೆ ಹುಟ್ಟುಹಬ್ಬದ ಶುಭಕೋರಿದರು. ಈ ಸಂದರ್ಭದಲ್ಲಿ ಹಿರೇಮಠದ ಪ್ರಮುಖರು, ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment