Monday, August 2, 2021

ಬಿ.ವಿ ಗಿರೀಶ್ ಸ್ಮರಣಾರ್ಥ ನೆನಪು ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ

ಭದ್ರಾವತಿ ಪದ್ಮನಿಲಯ ಹೋಟೆಲ್ ಸುನಂದ ಹಾಲ್‌ನಲ್ಲಿ ಬಿ.ವಿ ಗಿರೀಶ್ ಅಭಿಮಾನಿಗಳ ಬಳಗದಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸಾಮಾಜಿಕ ಹೋರಾಟಗಾರ, ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸ್ಮರಣಾರ್ಥ ಸವಿ ನೆನಪಿನ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.  
     ಭದ್ರಾವತಿ, ಆ. ೧: ನಗರದ ಪದ್ಮನಿಲಯ ಹೋಟೆಲ್ ಸುನಂದ ಹಾಲ್‌ನಲ್ಲಿ ಬಿ.ವಿ ಗಿರೀಶ್ ಅಭಿಮಾನಿಗಳ ಬಳಗದಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸಾಮಾಜಿಕ ಹೋರಾಟಗಾರ, ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸ್ಮರಣಾರ್ಥ ಸವಿ ನೆನಪಿನ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.  
    ಬಿ.ವಿ ಗಿರೀಶ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಶಾಸಕರು, ಗಿರೀಶ್ ಅವರ ಹೋರಾಟದ ಸ್ಮರಿಸಿದರು.
     ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಸಿದ್ದಾಂತ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಬಸವರಾಜ ಬಿ. ಆನೇಕೊಪ್ಪ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ, ಕಸಾಪ ತಾಲೂಕು ಅಧ್ಯಕ್ಷ ಅಪೇಕ್ಷ ಮಂಜುನಾಥ್, ಕರ್ನಾಟಕ ಭೋವಿ ನಿಗಮದ ನಿರ್ದೇಶಕ ಜಿ. ಆನಂದಕುಮಾರ್, ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ, ಮುಖಂಡರಾದ ಧರ್ಮರಾಜ್, ಕೆ. ಮಂಜುನಾಥ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಬಿ.ವಿ ಗಿರೀಶ್ ಕುಟುಂಬಸ್ಥರಾದ ತಂದೆ ವೆಂಕಟೇಶ್, ತಾಯಿ ಲಕ್ಷ್ಮಮ್ಮ, ದೇವಿಕಾ ಗಿರೀಶ್, ಅಂಕಿತ ಮತ್ತು ಧನುಷ್,  ಬಿ.ವಿ ಗಿರೀಶ್ ಅಭಿಮಾನಿಗಳ ಬಳಗ ಗೌರವಾಧ್ಯಕ್ಷ ಶಿವಕುಮಾರ್, ಅಧ್ಯಕ್ಷ ವಿವೇಕ್ ಪ್ರಶಾಂತ್, ಕಾರ್ಯಾಧ್ಯಕ್ಷರಾದ ರಾಘವೇಂದ್ರ, ಸಂದೇಶ್, ಪ್ರಧಾನ ಕಾರ್ಯದರ್ಶಿ ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment