Tuesday, August 17, 2021

ಸರ್ಕಾರಿ ಶಾಲೆಗೆ ಮುದ್ರಣ ಯಂತ್ರ, ಮಕ್ಕಳಿಗೆ ಲೇಖನ ಸಾಮಗ್ರಿ ವಿತರಣೆ

ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಭದ್ರಾವತಿ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಮುದ್ರಣ ಯಂತ್ರ ಹಾಗು ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.
    ಭದ್ರಾವತಿ, ಆ. ೧೬: ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಮುದ್ರಣ ಯಂತ್ರ ಹಾಗು ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.
    ನಗರಸಭೆ ವಾರ್ಡ್ ನಂ.೩ರ ವ್ಯಾಪ್ತಿಯಲ್ಲಿರುವ ಈ ಶಾಲೆಗೆ ಕಟ್ಟಡ ಕಾರ್ಮಿಕರಾಗಿರುವ ನಗರಸಭಾ ಸದಸ್ಯ ಮೇಸ್ತ್ರಿ ಜಾರ್ಜ್ ತಮ್ಮ ಸ್ವಂತ ಹಣದಲ್ಲಿ ಒಂದು ಮುದ್ರಣ ಯಂತ್ರ (ಪ್ರಿಂಟರ್) ಖರೀದಿಸಿ ಶಾಲೆಗೆ ಕೊಡುಗೆಯಾಗಿ ನೀಡಿದ್ದಾರೆ.
ಯೂನಿಯನ್ ವತಿಯಿಂದ ಶಾಲೆಯ ಸುಮಾರು ೮೦ ಮಕ್ಕಳಿಗೆ ನೋಟ್ ಬುಕ್ ಸೇರಿದಂತೆ ತಲಾ ೨೫೦ ರು. ಮೌಲ್ಯದ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.  
     ನಗರಸಭಾ ಸದಸ್ಯರಾದ ಜಾರ್ಜ್, ಮಣಿ ಎಎನ್‌ಎಸ್, ಸಂಘದ ಅಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷ ಅಭಿಲಾಷ್, ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್‌ಬಾಬು, ಗೌರವಾಧ್ಯಕ್ಷ ಅಂತೋಣಿ ಕ್ರೂಸ್, ಸಲಹೆಗಾರ ಅಂತೋಣಿ, ಜಿ. ಸುರೇಶ್, ತಾಂತ್ರಿಕ ಸಲಹೆಗಾರ ಮನೋಹರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಧಾ, ಸದಸ್ಯರಾದ ಕೃಷ್ಣಪ್ಪ, ಅಜಯ್, ಮುನ್ನ, ಮುಖಂಡರಾದ ಮಹಮ್ಮದ್ ಸೈಪುಲ್ಲಾ, ವಿನಯ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ವೈ.ಸಿ ಲಕ್ಷ್ಮಣ ನಿರೂಪಿಸಿದರು. ಎಸ್.ಬಿ ಶಿವಕುಮಾರ್ ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕ ಇ. ಶಿವರುದ್ರಯ್ಯ ಪ್ರಾಸ್ತಾವಿಕ ನುಡಿಗಳಾಡಿದರು. ಆರ್. ಕಲ್ಪನಾ ವಂದಿಸಿದರು.



No comments:

Post a Comment