Sunday, August 29, 2021

ಧರ್ಮಮಾರ್ಗದಿಂದ ಮಾತ್ರ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಸಾಧ್ಯ : ಕೆ.ಎಸ್ ಈಶ್ವರಪ್ಪ

ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭ ಪಂಚಾಯತ್ ರಾಜ್ ಹಾಗು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ನೆರವೇರಿಸಿದರು.
    ಭದ್ರಾವತಿ, ಆ. ೨೯: ಸಮಾಜದಲ್ಲಿನ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡು ಕೊಳ್ಳಬೇಕಾದರೆ ಎಲ್ಲರೂ ಧರ್ಮ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ ಎಂದು ಪಂಚಾಯತ್ ರಾಜ್ ಹಾಗು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
    ಅವರು ಭಾನುವಾರ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದರು.
ಸಮಾಜದಲ್ಲಿ ನೂರಾರು ಸಮಸ್ಯೆಗಳಿದ್ದು, ಈ ನಡುವೆಯೂ ಮಠಮಂದಿರಗಳು ಸಮಾಜದ ಏಳಿಗೆಗಾಗಿ ಶ್ರಮಿಸುವ ಜೊತೆಗೆ ಉತ್ತಮ ಧರ್ಮ ಸಂಸ್ಕಾರ ನೀಡುತ್ತಿವೆ. ಧರ್ಮ ಮಾರ್ಗದಲ್ಲಿ ಸಾಗಿದರೆ ಮಾತ್ರ ಎಲ್ಲದಕ್ಕೂ ಪರಿಹಾರ ಕೊಂಡುಕೊಳ್ಳಬಹುದಾಗಿದೆ ಎಂದರು.
    ಗುರುಗಳು ತ್ಯಾಗಿಗಳಾಗಿದ್ದು, ಯಾವುದೇ ಸ್ವಾರ್ಥ ಬಯಸದೆ ಸಮಾಜಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡಿರುತ್ತಾರೆ. ಇಂತಹ ಗುರುಗಳಿಗೆ ಬೆಲೆಕಟ್ಟಲು ಸಾಧ್ಯವಿಲ್ಲ. ಸಮಾಜದ ಏಳಿಗೆಗಾಗಿ ಗುರುಗಳು ಹೇಳಿದಂತೆ ನಡೆದುಕೊಳ್ಳಲು ಸಿದ್ದ. ಬಿಳಿಕಿ ಶ್ರೀ ಮತ್ತು ಬೆಕ್ಕಿನ ಕಲ್ಮಠ ಶ್ರೀಗಳಿಗೆ ದೇವರು ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
    ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪೀಠಾಧಿಪತಿಯಾಗಿ ೩೧ ವರ್ಷಗಳು ಕಳೆದಿವೆ. ಯಾವುದೇ ಆದಾಯವಿಲ್ಲದಿದ್ದರೂ ಸಹ ಕೇವಲ ಅಂಚಿನ ಮನೆಯಲ್ಲಿದ್ದ ಮಠ ಇಂದು ಬೃಹದಾಗಿ ಬೆಳೆದಿದೆ. ಸಮಾಜದ ಪ್ರತಿಯೊಬ್ಬರು ಮಠದ ಬೆಳವಣಿಗೆಗೆ ಕಾರಣಕರ್ತರಾಗಿದ್ದಾರೆ. ಮಠವಿದ್ದರೆ ಸಮಾಜ, ಸಮಾಜವಿದ್ದರೆ ಮಠ ಎಂಬುದು ಈ ಮೂಲಕ ಸಾಬೀತು ಮಾಡಿ ತೋರಿಸಲಾಗಿದೆ ಎಂದರು.
    ದಿವ್ಯ ಸಾನಿಧ್ಯವಹಿಸಿದ್ದ ಶಿವಮೊಗ್ಗ ಆನಂದಪುರ ಶ್ರೀ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಮನೆಗೂ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಮಠಗಳು ಸಮಾಜ ಮುಖಿಯಾಗಿರಬೇಕು. ಸರ್ಕಾರ ಮಾಡುವ ಕೆಲಸಗಳನ್ನು ಮಠಮಂದಿರಗಳು ಮಾಡುತ್ತಿವೆ. ಈ ಹಿನ್ನಲೆಯಲ್ಲಿ ಮಠಮಂದಿರಗಳು ಸಹ ಬೆಳವಣಿಗೆ ಹೊಂದಬೇಕು. ಇವುಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರದ್ದಾಗಿದೆ ಎಂದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರ ಅವಶ್ಯಕವಾಗಿದೆ. ಮಠ ಮಂದಿರಗಳು ಪ್ರತಿಯೊಬ್ಬರಿಗೂ ಉತ್ತಮ ಸಂಸ್ಕಾರ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಮಾನವ ಕುಲದ ಕಲ್ಯಾಣಕ್ಕಾಗಿ ಶ್ರಮಿಸುತ್ತಿವೆ. ಆದರೆ ಸಮಾಜದಲ್ಲಿ ಕೆಲವರು ಧರ್ಮದ ಹೆಸರಿನಲ್ಲಿ ಅಪಪ್ರಚಾರ ನಡೆಸುತ್ತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು.
    ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಶ್ರೀ ಜ್ಞಾನಪ್ರಭು ಸಿದ್ದರಾಮ ರಾಜದೇಶೀಕೇಂದ್ರ ಸ್ವಾಮೀಜಿ, ಶ್ರೀ ವಿರೂಪಾಕ್ಷ ಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಮಹಾಂತ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಗುದ್ದಲೀಶ್ವರ ಸ್ವಾಮೀಜಿ, ಡಾ. ಶ್ರೀ ಮಹಾಂತ ಸ್ವಾಮೀಜಿ, ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ,  ಶ್ರೀ ಚನ್ನವೀರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಡಾ. ಶ್ರೀ ಬಸವಜಯಚಂದ್ರ ಸ್ವಾಮೀಜಿ, ಶ್ರೀ ಶಶಿಶೇಖರ ಸಿದ್ದಬಸವ ಸ್ವಾಮೀಜಿ ಮತ್ತು ಶ್ರೀ ಮರುಳಸಿದ್ದ ಪಂಡಿತಾರಾಧ್ಯ ಸ್ವಾಮೀಜಿ ಉಪಸ್ಥಿತರಿರುವರು.
    ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ ಕಾಂತೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ, ಹಿರೇಮಠದ ಗೌರವಾಧ್ಯಕ್ಷ ಟಿ.ವಿ ಈಶ್ವರಯ್ಯ, ಮನೋಹರ್ ಅಬ್ಲಿಗೆರೆ, ಸಿದ್ದಲಿಂಗಯ್ಯ, ಪಾಪಿಬಾಯಿ, ಬಿ.ಎಂ. ಸಂತೋಷ್, ಯಶವಂತರಾವ್ ಘೋರ್ಪಡೆ, ಎ. ಮಾಧು, ಬಿ.ಟಿ ನಾಗರಾಜ್, ಎಂ.ಎಸ್ ಜನಾರ್ಧನ ಅಯ್ಯಂಗಾರ್, ಎ.ಟಿ ರವಿ, ನಂದಿ ಮಲ್ಲಿಕಾರ್ಜುನ, ಡಾ.ಜಿ.ಎಂ ನಟರಾಜ್, ಪ್ರಶಾಂತ್, ಸಿದ್ದಬಸಪ್ಪ, ಎಂ.ಎಸ್ ಬಸವರಾಜ್, ವಸಂತ್, ಮಂಜುನಾಥ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  



ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭದಲ್ಲಿ ೫೦ ವರ್ಷ ಪೂರೈಸಿದ ಬಿಳಿಕಿ ಶ್ರೀ ಹಾಗೂ ೭೦ ವರ್ಷ ಪೂರೈಸಿದ ಬೆಕ್ಕಿನಕಲ್ಮಠ ಶ್ರೀಗಳಿಗೆ ಭಕ್ತ ವೃಂದದಿಂದ ಗುರು ನಮನ ಸಲ್ಲಿಸಲಾಯಿತು.  

No comments:

Post a Comment