Tuesday, August 3, 2021

ಭದ್ರೆ ಪ್ರತಿ ಬಾರಿ ಪೂರ್ಣ ಪ್ರಮಾಣದಲ್ಲಿ ತುಂಬಲಿ, ಕೊನೆಯ ಭಾಗದ ರೈತರಿಗೂ ನೀರು ತಲುಪಲಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಕೆ ಸಂಗಮೇಶ್ವರ್ ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮುಖಂಡರ ಸಮ್ಮುಖದಲ್ಲಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಣೆ ಹಾಗು ಗಂಗಾ ಪೂಜೆ ನೆರವೇರಿಸಿದರು.
     ಭದ್ರಾವತಿ, ಆ. ೩: ತಾಲೂಕಿನ ಜೀವನದಿ ಭದ್ರಾ ನದಿ ಜಲಾಶಯ ಪ್ರತಿ ವರ್ಷ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಮೂಲಕ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತಾಗಲಿ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
      ಅವರು ಮಂಗಳವಾರ ಸರ್ವ ಧರ್ಮ ಗುರುಗಳ ಹಾಗು ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮುಖಂಡರ ಸಮ್ಮುಖದಲ್ಲಿ ಭದ್ರಾ ಜಲಾಶಯದಲ್ಲಿ ಭದ್ರೆಗೆ ಬಾಗಿನ ಸಮರ್ಪಣೆ ಹಾಗು ಗಂಗಾ ಪೂಜೆ ನೆರವೇರಿಸಿ ಮಾತನಾಡಿದರು.
    ನಾನು ಕ್ಷೇತ್ರದ ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿ ಪ್ರತಿ ಬಾರಿ ಸಹ ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುತ್ತಿರುವುದು ನನ್ನ ಸೌಭಾಗ್ಯವಾಗಿದೆ. ಜಲಾಶಯದ ಅಚ್ಚಕಟ್ಟು ವ್ಯಾಪ್ತಿಯಲ್ಲಿರುವ ಹಾಗು ಕೊನೆ ಭಾಗದ ರೈತರು ನೆಮ್ಮದಿಯಿಂದ ಬದುಕುವಂತಾಗಬೇಕು.  ಈ ಬಾರಿ ಜಲಾಶಯ ೧೫ ದಿನಗಳ ಮೊದಲೇ ಭರ್ತಿಯಾಗಿರುವುದು ಸಂತಸವನ್ನುಂಟು ಮಾಡಿದೆ. ಇದೆ ರೀತಿ ಪ್ರತಿ ವರ್ಷ ಸಹ ಜಲಾಶಯ ಭರ್ತಿಯಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.
     ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಿರಿಯೂರು ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಾರ್ಯ ಸ್ವಾಮೀಜಿ, ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಕೃಷ್ಣಮೂರ್ತಿ ಸೋಮಯಾಜಿ ಸೇರಿದಂತೆ ಸರ್ವಧರ್ಮ ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಪ್ರತಿ ಬಾರಿ ಬಾಗಿನ ಸಮರ್ಪಣೆ ಕಾರ್ಯಕ್ರಮ ಕ್ಷೇತ್ರದಲ್ಲಿ ಹಬ್ಬದ ವಾತಾವರಣ ಉಂಟು ಮಾಡುತ್ತಿರುವುದು ವಿಶೇಷವಾಗಿದೆ.
     ಶಾಸಕರ ಕುಟುಂಬ ವರ್ಗದವರಾದ ಸಹೋದರರಾದ ಬಿ.ಕೆ ಜಗನ್ನಾಥ್, ಬಿ.ಕೆ ಮೋಹನ್, ಬಿ.ಕೆ ಶಿವಕುಮಾರ್, ಪುತ್ರರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್, ಬಿ.ಎಂ ಮಂಜುನಾಥ್, ಬಿ.ಎಂ ರವಿಕುಮಾರ್, ನಂದೀಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ತಾಲೂಕು ಛಲವಾದಿ ಸಮಾಜದ ಅಧ್ಯಕ್ಷ ಚನ್ನಪ್ಪ, ನಗರಸಭೆ ಮತ್ತು ತಾಲೂಕು ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.

No comments:

Post a Comment