Friday, August 20, 2021

ಕಾಂಗ್ರೆಸ್ ಕಾರ್ಮಿಕ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಎಚ್. ಮಂಜುನಾಥ್ ನೇಮಕ

ಕಾಂಗ್ರೆಸ್ ಕಾರ್ಮಿಕ ವಿಭಾಗದ ಭದ್ರಾವತಿ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಎಚ್. ಮಂಜುನಾಥ್ ನೇಮಕಗೊಂಡಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಆದೇಶ ಪತ್ರ ವಿತರಿಸಿದರು.
    ಭದ್ರಾವತಿ, ಆ. ೨೦: ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ನ್ಯೂಟೌನ್ ಲಿಂಗಾಯಿತರ ಬೀದಿ ನಿವಾಸಿ ಎಚ್. ಮಂಜುನಾಥ್ ನೇಮಕಗೊಂಡಿದ್ದಾರೆ.
    ಪ್ರದೇಶ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಕೆ. ಪುಟ್ಟಸ್ವಾಮಿ ಗೌಡ ನಿರ್ದೇಶನದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಸೂಚನೆ ಮೇರೆಗೆ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಎಂ.ಕೆ ಪ್ರಮೋದ್ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಕಾರ್ಮಿಕ ವಿಭಾಗದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಕಾರ್ಯ ನಿರ್ವಹಿಸುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ್ದಾರೆ.
    ಮಂಜುನಾಥ್ ಈಗಾಗಲೇ ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಯೂನಿಯನ್ ತಾಲೂಕು ಶಾಖೆಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಅರಿವು ಹೊಂದಿದ್ದಾರೆ.
    ಆದೇಶ ಪತ್ರವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ವಿತರಿಸಿದರು. ಪ್ರಮುಖರಾದ ವಿಭಾಗದ ಜಿಲ್ಲಾಧ್ಯಕ್ಷ ಎಂ.ಕೆ ಪ್ರಮೋದ್ ನಗರಸಭಾ ಸದಸ್ಯ ಜಾರ್ಜ್, ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಯೂನಿಯನ್ ತಾಲೂಕು ಶಾಖೆ ಅಧ್ಯಕ್ಷ ಚಂದ್ರಶೇಖರ್, ತಾಂತ್ರಿಕ ಸಲಹೆಗಾರ ಮನೋಹರ್, ಕಾರ್ಯಾಧ್ಯಕ್ಷ ಬಿ.ಎಸ್ ಅಭಿಲಾಷ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
        ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ನೇಮಕಗೊಳ್ಳಲು ಕಾರಣಕರ್ತರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರಿಗೆ ಎಚ್. ಮಂಜುನಾಥ್ ಕೃತಜ್ಞತೆ ಸಲ್ಲಿಸಿದ್ದಾರೆ.

No comments:

Post a Comment