ಭದ್ರಾವತಿ ಡೈರಿ ಸರ್ಕಲ್ನಲ್ಲಿ ಹೆದ್ದಾರಿ ಪಕ್ಕದಲ್ಲಿರುವ ೨ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಆ. ೨೪: ಡೈರಿ ಸರ್ಕಲ್ನಲ್ಲಿ ಹೆದ್ದಾರಿ ಪಕ್ಕದಲ್ಲಿರುವ ೨ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.
ಗೃಹ ಸಚಿವ ಅರಗಜ್ಞಾನೇಂದ್ರ ಅವರು ಮಂಗಳವಾರ ಕೆಎಸ್ಆರ್ಪಿ ೮ನೇ ಪಡೆಗೆ ಆಗಮಿಸಿದ ಸಂದರ್ಭದಲ್ಲಿ ಕರಾವೇ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಎರಡು ಮದ್ಯದಂಗಡಿಗಳನ್ನು ತಕ್ಷಣ ಬೇರೆಡೆಗೆ ಸ್ಥಳಾಂತರಿಸುವ ಜೊತೆಗೆ ವಿದ್ಯಾರ್ಥಿಗಳು, ಮಹಿಳೆಯರು, ಪ್ರಯಾಣಿಕರು ಹಾಗು ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ತಪ್ಪಿಸಬೇಕೆಂದು ಆಗ್ರಹಿಸಲಾಯಿತು. ಮನವಿ ಸ್ವೀಕರಿಸಿದ ಸಚಿವರು ತಕ್ಷಣ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾರದ, ತಾಲೂಕು ಅಧ್ಯಕ್ಷೆ ಮಹೇಶ್ವರಿ, ಯಾಸ್ಮಿನ್ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment