Sunday, August 29, 2021

ಯುವ ಘಟಕದಿಂದ ಬಿಳಿಕಿ ಶ್ರೀಗಳಿಗೆ ಗುರು ನಮನ

ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಭಾನುವಾರ ಶ್ರೀ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಶ್ರೀಗಳಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ವತಿಯಿಂದ ಗುರು ನಮನ ಸಲ್ಲಿಸಲಾಯಿತು.
    ಭದ್ರಾವತಿ, ಆ. ೨೯: ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಭಾನುವಾರ ಶ್ರೀ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಶ್ರೀಗಳಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ವತಿಯಿಂದ ಗುರು ನಮನ ಸಲ್ಲಿಸಲಾಯಿತು.
    ಯುವ ಘಟಕದ ರಾಜ್ಯಾಧ್ಯಕ್ಷ ಮನೋಹರ್ ಅಬ್ಲಿಗೆರೆ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ತಾಲೂಕು ಅಧ್ಯಕ್ಷ ಎಚ್. ಮಂಜುನಾಥ್, ಉಪಾಧ್ಯಕ್ಷರಾದ ಆರ್.ಎನ್ ರುದ್ರೇಶ್, ಬಿ.ಎಸ್ ಶ್ರೀಕಾಂತ್, ಮಹಾದೇವ, ಪ್ರಧಾನ ಕಾರ್ಯದರ್ಶಿ ಕೆ.ಆರ್ ಆನಂದ್, ಖಜಾಂಚಿ ಬಿ.ಎಂ ರಮೇಶ್, ಸಹ ಕಾರ್ಯದರ್ಶಿ ಬಸವರಾಜ, ತಿಪ್ಪೇಸ್ವಾಮಿ, ಆನಂದಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment