Friday, August 13, 2021

ಶಿವಪಾರ್ವತಿದೇವಿ, ಶ್ರೀ ಬಸವೇಶ್ವರಸ್ವಾಮಿ ನೂತನ ದೇವಾಲಯ ಲೋಕಾರ್ಪಣೆ

ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಿದ ಭದ್ರಾವತಿ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ೨ನೇ ತಿರುವಿನಲ್ಲಿ ನಿರ್ಮಾಣಗೊಂಡಿರುವ ಶ್ರೀ ಶಿವಪಾರ್ವತಿದೇವಿ ಅಮ್ಮನವರ ಹಾಗು ಶ್ರೀ ಬಸವೇಶ್ವರಸ್ವಾಮಿ ನೂತನ ದೇವಾಲಯ ಲೋಕಾರ್ಪಣೆ ಹಾಗು ವಿಗ್ರಹಗಳ ಪ್ರತಿಷ್ಠಾಪನೆ ಸಮಾರಂಭವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
     ಭದ್ರಾವತಿ, ಆ. ೧೩:  ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ೨ನೇ ತಿರುವಿನಲ್ಲಿ ನಿರ್ಮಾಣಗೊಂಡಿರುವ ಶ್ರೀ ಶಿವಪಾರ್ವತಿದೇವಿ ಅಮ್ಮನವರ ಹಾಗು ಶ್ರೀ ಬಸವೇಶ್ವರಸ್ವಾಮಿ ನೂತನ ದೇವಾಲಯ ಲೋಕಾರ್ಪಣೆ ಹಾಗು ವಿಗ್ರಹಗಳ ಪ್ರತಿಷ್ಠಾಪನೆ ಶುಕ್ರವಾರ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.
    ಶಾಸಕ ಬಿ.ಕೆ ಸಂಗಮೇಶ್ವರ್ ದೇವಸ್ಥಾನ ಲೋಕಾರ್ಪಣೆಗೊಳಿಸಿದರು. ಇದಕ್ಕೂ ಮೊದಲು ಧಾರ್ಮಿಕ ಆಚರಣೆಗಳು ಜರುಗಿದವು.  ಶ್ರೀ ಕ್ಷೇತ್ರ ಭದ್ರಗಿರಿ ಮುರುಗೇಶ್ ಸ್ವಾಮೀಜಿ ಉಪಸ್ಥಿತರಿದ್ದರು.
     ವೇದಿಕೆ ಕಾರ್ಯಕ್ರಮದಲ್ಲಿ ವಿಗ್ರಹ ದಾನಿಗಳಾದ ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರಗಳ ರಾಜ್ಯ ಸಂಯೋಜಕ ಪ್ರಭಾಕರ ಬೀರಯ್ಯ, ಶ್ರೀ ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ನೂತನ ದೇವಸ್ಥಾನ ಸಮಿತಿ ಅಧ್ಯಕ್ಷ ಶಿವಗಂಗಯ್ಯ, ಬಾರಂದೂರು ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಸಮಾಜ ಸೇವಕ, ಪೊಲೀಸ್ ಉಮೇಶ್ ಅವರಿಂದ ಅನ್ನಸಂತರ್ಪಣೆ ನೆರವೇರಿತು. ಪೂರ್ಣಿಮಾ ನಿರಂಜನ್ ಸ್ವಾಗತಿಸಿದರು. ನಾಗಲಕ್ಷ್ಮಿ ನಿರೂಪಿಸಿದರು.

No comments:

Post a Comment