Monday, August 23, 2021

ನಗರಸಭೆ ವಾರ್ಡ್ ನಂ.೨೯ ಚುನಾವಣೆ : ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ನಾಮಪತ್ರ ಸಲ್ಲಿಕೆ

ಭದ್ರಾವತಿ ನಗರಸಭೆ ವಾರ್ಡ್ ನಂ.೨೯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರ ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು.
    ಭದ್ರಾವತಿ, ಆ. ೨೩: ನಗರಸಭೆ ವಾರ್ಡ್ ನಂ.೨೯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರ ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ನಾಮಪತ್ರ ಸಲ್ಲಿಸಿದರು.
    ಸಾಮಾನ್ಯ ಮಹಿಳೆಗೆ ಮೀಸಲಾಗಿರುವ ಕ್ಷೇತ್ರಕ್ಕೆ ಹಾಲಿ ನಗರಸಭಾ ಸದಸ್ಯ ಅನಿಲ್‌ಕುಮಾರ್ ತಮ್ಮ ಪತ್ನಿ ಆರ್. ನಾಗರತ್ನ ಅವರನ್ನು ಕಣಕ್ಕಿಳಿಸಿದ್ದು, ಬೆಳಿಗ್ಗೆ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಆರ್. ನಾಗರತ್ನ ವಿಶೇಷ ಪೂಜೆ ಸಲ್ಲಿಸಿದ ನಂತರ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ  ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿರವರ ನಿವಾಸದವರೆಗೂ ಸಾಗಿ ಅಪ್ಪಾಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ತರೀಕೆರೆ ರಸ್ತೆಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ತೆರೆಯಲಾಗಿರುವ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು.
      ಜೆಡಿಎಸ್ ವರಿಷ್ಠರಾದ ಶಾರದ ಅಪ್ಪಾಜಿ, ಜಿಲ್ಲಾ ಪಂಚಾಯಿತಿ ಸದಸ್ಯ ಜೆ.ಪಿ ಯೋಗೇಶ್, ಮಾಜಿ ಸದಸ್ಯ ಎಸ್. ಕುಮಾರ್, ಮುಖಂಡರಾದ ಅನಿಲ್‌ಕುಮಾರ್, ಎಂ.ಎ ಅಜಿತ್, ಡಿ.ಟಿ ಶ್ರೀಧರ್, ಕರಿಯಪ್ಪ, ಲೋಕೇಶ್ವರ್ ರಾವ್, ಎಂ. ರಾಜು, ಬದರಿನಾರಾಯಣ, ನಂಜುಂಡೇಗೌಡ, ಮೈಲಾರಪ್ಪ, ಉಮೇಶ್, ದಿಲೀಪ್, ಕೇಬಲ್ ಸುರೇಶ್, ಪ್ರಕಾಶ್,  ಮಹಾದೇವಯ್ಯ, ನಗರಸಭಾ ಸದಸ್ಯರಾದ ಉದಯ್‌ಕುಮಾರ್, ಕೋಟೇಶ್ವರ್‌ರಾವ್, ರೇಖಾ, ಎಸ್. ಜಯಶೀಲ, ಆರ್. ಮೋಹನ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



No comments:

Post a Comment