ಭದ್ರಾವತಿ, ಆ. ೧೪: ಮನೆ ಮುಂದೆ ಆಟವಾಡುತ್ತಿದ್ದ ೪ ವರ್ಷದ ಮಗುವಿನ ಮೇಲೆ ಅಡಕೆ ಮರ ಬಿದ್ದ ಪರಿಣಾಮ ಮೃತಪಟ್ಟಿರುವ ಘಟನೆ ತಾಲೂಕಿನ ಸಿದ್ದರಮಟ್ಟಿಯ ದೇವರಹಟ್ಟಿ ಗ್ರಾಮದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದ ಅಡಕೆ ತೋಟದವೊಂದರ ಮನೆಯಲ್ಲಿ ವಾಸವಾಗಿರುವ ಸಂತೋಷ್ ಎಂಬುವರ ೪ ವರ್ಷದ ಹೆಣ್ಣು ಮಗು ಆದ್ಯಾ ಮೇಲೆ ಏಕಾಏಕಿ ಅಡಕೆ ಮರ ಮುರಿದು ಬಿದ್ದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಈ ಸಂಬಂಧ ಸಂತೋಷ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
No comments:
Post a Comment