ಭದ್ರಾವತಿಯಲ್ಲಿ ಸುಮಾರು ೭೦ ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದ್ದು, ಯಾರಿಗಾದರೂ ಆ ವ್ಯಕ್ತಿಯ ಸುಳಿವು ಕಂಡು ಬಂದಲ್ಲಿ ಮಾಹಿತಿ ನೀಡಲು ಕೋರಲಾಗಿದೆ.
ಭದ್ರಾವತಿ, ಆ. ೬: ಸುಮಾರು ೭೦ ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದ್ದು, ಯಾರಿಗಾದರೂ ಆ ವ್ಯಕ್ತಿಯ ಸುಳಿವು ಕಂಡು ಬಂದಲ್ಲಿ ಮಾಹಿತಿ ನೀಡಲು ಕೋರಲಾಗಿದೆ.
ನಗರದ ಸಿ.ಎನ್ ರಸ್ತೆ ಪರಿಮಳ ಹೋಟೆಲ್ ಸಮೀಪದ ಅಂಗಡಿಯೊಂದರ ಮುಂಭಾಗ ಅನಾರೋಗ್ಯದಿಂದ ಅಸ್ವಸ್ಥಗೊಂಡು ಮಲಗಿದ್ದ ಅಪರಿಚಿತ ವ್ಯಕ್ತಿಯನ್ನು ಅಂಗಡಿ ಮಾಲೀಕರು ೧೦೮ ವಾಹನಕ್ಕೆ ಕರೆ ಮಾಡಿ ಮಾಹಿತಿ ತಿಳಿಸಿ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾರಿಗಾದರೂ ಅಪರಿಚಿತ ವ್ಯಕ್ತಿಯ ಬಗ್ಗೆ ಸುಳಿವು ಕಂಡು ಬಂದಲ್ಲಿ. ದೂ. ಸಂಖ್ಯೆ ೦೮೨೮೨-೨೬೬೩೪೩ ಅಥವಾ ಮೊ: ೯೪೮೦೮೦೩೩೫೪ ಸಂಖ್ಯೆಗೆ ಕರೆ ಮಾಡುವಂತೆ ಕೋರಲಾಗಿದೆ.
No comments:
Post a Comment