ಭದ್ರಾವತಿ, ಆ. ೬: ಬೆಂಗಳೂರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾಯಕ ವರ್ಷ ಯೋಜನೆಯಡಿ ನಗರದ ಭೂಮಿಕಾ ಸಹಯೋಗದೊಂದಿಗೆ ಪ್ರೊ. ಗಜಾನನ ಹೆಗಡೆ ಮೈಸೂರು ವಿರಚಿತ ಕೃತಿ ಆಧಾರಿತ 'ರಸ ರಾಮಾಯಣ' ಗಾಯನ-ಚಿತ್ರಣ-ಭಾವಾಭಿನಯ-ವ್ಯಾಖ್ಯಾನ ವಿಶೇಷ ಕಾರ್ಯಕ್ರಮ ಆ.೭ರಂದು ಸಂಜೆ ೫.೩೦ಕ್ಕೆ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಉಪಾಧ್ಯಕ್ಷ, ಕನ್ನಡ ಜಾಗೃತಿ ಸಮಿತಿಯ ಎಂ.ಎನ್ ಸುಂದರ್ರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಭೂಮಿಕಾ ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ರಂಗಕಲಾವಿದ, ಕಿರುತೆರೆ ನಟ, ಕನ್ನಡ ಕಾಯಕಪಡೆಯ ಅಪರಂಜಿ ಶಿವರಾಜ್, ರಾಜ್ಯ ಪ್ರಶಸ್ತಿ ಪುರಸ್ಕೃತ ಸುಬ್ರಾಯ ಹೆಗಡೆ ಕಪ್ಪೆಕೆರೆ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
No comments:
Post a Comment