ರಾಮ್ ಸೇನಾ ಕರ್ನಾಟಕ ತಾಲೂಕು ಶಾಖೆ ವತಿಯಿಂದ ಭದ್ರಾವತಿಯಲ್ಲಿ ಈ ಬಾರಿ ಸಾರ್ವಜನಿಕವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಮಂಗಳವಾರ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೨೪: ಕೋವಿಡ್-೧೯ ಪರಿಮಿತಿಯಲ್ಲಿ ಈ ಬಾರಿ ವಿನಾಯಕ ಚತುರ್ಥಿಯಂದು ಸಾರ್ವಜನಿಕವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಮಂಗಳವಾರ ರಾಮ್ ಸೇನಾ ಕರ್ನಾಟಕ ತಾಲೂಕು ಶಾಖೆವತಿಯಿಂದ ತಹಸೀಲ್ದಾರ್ ಆರ್. ಪ್ರದೀಪ್ಗೆ ಮನವಿ ಸಲ್ಲಿಸಲಾಯಿತು.
ರಾಮ್ ಸೇನಾ ಕರ್ನಾಟಕ ಜಿಲ್ಲಾಧ್ಯಕ್ಷ ಉಮೇಶ್ಗೌಡ, ತಾಲೂಕು ಅಧ್ಯಕ್ಷ ಸಚಿನ್ ಎಂ. ವರ್ಣೇಕರ್, ಪ್ರವೀಣ್ಶೆಟ್ಟಿ, ಪವನ್, ಮಹೇಶ್ ಶೇಟ್, ಪ್ರತೀಕ್ ಜಿ ಶೇಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment