Thursday, August 5, 2021

ಭದ್ರಾ ಜಲಾಶಯದಿಂದ ೧೬೦೦ ಕ್ಯೂಸೆಕ್ಸ್ ನೀರು ಬಿಡುಗಡೆ

ಭದ್ರಾವತಿ ತಾಲೂಕಿನ ಜೀವ ನದಿ ಭದ್ರಾ ನದಿ ಜಲಾಶಯ ಈ ಬಾರಿ ನಿರೀಕ್ಷೆಗೂ ಮೊದಲೇ ಭರ್ತಿಯಾಗಿದ್ದು, ಗುರುವಾರ ಬೆಳಿಗ್ಗೆ ೪ ಕ್ರಸ್ಟ್ ಗೇಟ್ ಮೂಲಕ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಯಿತು.
      ಭದ್ರಾವತಿ, ಆ. ೫: ತಾಲೂಕಿನ ಜೀವ ನದಿ ಭದ್ರಾ ನದಿ ಜಲಾಶಯ ಈ ಬಾರಿ ನಿರೀಕ್ಷೆಗೂ ಮೊದಲೇ ಭರ್ತಿಯಾಗಿದ್ದು, ಗುರುವಾರ ಬೆಳಿಗ್ಗೆ ೪ ಕ್ರಸ್ಟ್ ಗೇಟ್ ಮೂಲಕ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಯಿತು.
    ಬೆಳಿಗ್ಗೆ ೧೧.೧೫ರ ಸುಮಾರಿಗೆ ಜಲಾಶಯದಿಂದ ೪ ಕ್ರಸ್ಟ್ ಗೇಟ್‌ಗಳ ಮೂಲಕ ಸುಮಾರು ೧೬೦೦ ಕ್ಯೂಸೆಕ್ಸ್ ನೀರು ಹೊರ ಬಿಡಲಾಗುತ್ತಿದೆ. ಬಾಳೆಹೊನ್ನೂರು ಗೇಜ್ ಮಾಹಿತಿಯಂತೆ ಮಧ್ಯಾಹ್ನ ೧.೩೦ ಸುಮಾರಿಗೆ ಜಲಾಶಯದ ನೀರಿನ ಮಟ್ಟ ೧೮೪.೩ ಅಡಿ ಇದ್ದು, ೬೮೬೪ ಕ್ಯೂಸೆಕ್ಸ್ ಒಳಹರಿವು ಹೊಂದಿದೆ.
   ಜಲಾಶಯದ ವ್ಯಾಪ್ತಿಯಲ್ಲಿ ಮಳೆಯಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಜಲಾಶಯಕ್ಕೆ ಹರಿದು ಬರುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ಯಾವುದೇ ಕ್ಷಣದಲ್ಲಿ ಹೊರ ಬಿಡುವ ನೀರಿನ ಪ್ರಮಾಣದಲ್ಲೂ ಏರಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿದೆ.
   ಈಗಾಗಲೇ ತಾಲೂಕು ಆಡಳಿತ ನದಿ ಪಾತ್ರದ ಹಾಗು ತಗ್ಗು ಪ್ರದೇಶದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಿದ್ದು, ನದಿ ತಡದಲ್ಲಿ ಸಾರ್ವಜನಿಕರು, ಕುರಿ ಹಾಗು ದನಗಾಯಿಗಳು ತಿರುಗಾಡದಂತೆ ಸೂಚಿಸಲಾಗಿದೆ.



No comments:

Post a Comment