Monday, August 9, 2021

ಕೆಪಿಸಿಸಿ ಸಾಮಾಜಿಕ ಜಾಲತಾಣಕ್ಕೆ ನೂತನ ಪದಾಧಿಕಾರಿಗಳ ನೇಮಕ

ಶಿವಮೊಗ್ಗ ಜಿಲ್ಲಾ ಕೆಪಿಸಿಸಿ ಸಾಮಾಜಿಕ ಜಾಲತಾಣದ ಭದ್ರಾವತಿ ತಾಲೂಕು ಪದಾಧಿಕಾರಿಗಳು ನೇಮಕಗೊಂಡಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ್ದಾರೆ.
   ಭದ್ರಾವತಿ, ಆ. ೯: ಶಿವಮೊಗ್ಗ ಜಿಲ್ಲಾ ಕೆಪಿಸಿಸಿ ಸಾಮಾಜಿಕ ಜಾಲತಾಣದ ನೂತನ ತಾಲೂಕು ಪದಾಧಿಕಾರಿಗಳು ನೇಮಕಗೊಂಡಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ್ದಾರೆ.
   ತಾಲೂಕು ಅಧ್ಯಕ್ಷರಾಗಿ ಸದಾಶಿವಮೂರ್ತಿ, ಉಪಾಧ್ಯಕ್ಷರಾಗಿ ವಿನೋದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತಬ್ರೇಶ್ ಖಾನ್ ನೇಮಕಗೊಂಡಿದ್ದಾರೆ.
    ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ನೇಮಕಾತಿ ಆದೇಶ ಪತ್ರ ನೀಡಿ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು.  ಜಿಲ್ಲಾ ಕೆಪಿಸಿಸಿ ಸಾಮಾಜಿಕ ಜಾಲತಾಣ ಅಧ್ಯಕ್ಷ ಎನ್.ಡಿ ಪ್ರವೀಣ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

No comments:

Post a Comment